ಟಿಪ್ಪರ್ ಪಿಲ್ಲರ್ಗೆ ಡಿಕ್ಕಿ, ಹೊತ್ತಿ ಉರಿದು ವಾಹನದಲ್ಲೇ ಚಾಲಕ ಸಜೀವ ದಹನ | JANATA NEWS
ಮಂಡ್ಯ : ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ಲೈ ಓವರ್ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿಯೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆ ವಾಹನದೊಳಗೆ ಚಾಲಕ ಸಿಲುಕಿಕೊಂಡಿದ್ದಾನೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ.
ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ಟಿಪ್ಪರ್ ತೆರಳುತ್ತಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ಲೈ ಓವರ್ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿಯೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆ ವಾಹನದೊಳಗೆ ಚಾಲಕ ಸಿಲುಕಿಕೊಂಡಿದ್ದಾನೆ.
ವಾಹನದಿಂದ ಹೊರಬರಲಾಗದೇ ಚಾಲಕ ಸಜೀವ ದಹನವಾಗಿದ್ದಾನೆ. ಅಗ್ನಿಶಾಮಕ ಮತ್ತು ಪೋಲೀಸ್ ಸಿಬ್ಬಂದಿಗಳು ಬೆಂಕಿ ನಂದಿಸಿ ಚಾಲಕನ ಶವ ಹೊರ ತೆಗೆದಿದ್ದಾರೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.