ಟೈಯರ್ ಸ್ಪೋಟ, ಹೊಳೆಗೆ ಬಿದ್ದ ಕೆಎಸ್ಆರ್ಟಿಸಿ ಬಸ್ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | JANATA NEWS
ಮಂಗಳೂರು : ಬಸ್ನ ಟೈಯರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಬಸ್, ಹೊಳೆಗೆ ಉರುಳಿ ಬಿದ್ದು ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಹಾಗೂ 25 ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಂಗಳೂರಿನ ಸುಳ್ಯದ ಸಂಪಾಜೆಯ ಗಡಿಕಲ್ಲು ಬಳಿಯಲ್ಲಿ, ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಟೈಯರ್ ಸ್ಪೋಟಗೊಂಡಿದೆ. ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ, ಹೊಳೆಗೆ ಉರುಳಿಬಿದ್ದಿದೆ.
ಹೊಳೆಯಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದ ಪರಿಣಾಮ ಭಾರೀ ಅನಾಹುತ ತಪ್ಪಿದೆ. 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ.
RELATED TOPICS:
English summary :KARTC Bus accident in Magalore, More than 25 passengers injured