ಪಾವಗಡದಲ್ಲಿ ಬಸ್ ಅಪಘಾತ, ಇಬ್ಬರು ವಿದ್ಯಾರ್ಥಿಗಳು ಸೇರಿ ಐವರು ದುರ್ಮರಣ, 43 ಜನರು ಗಾಯ | JANATA NEWS
ತುಮಕೂರು : ಪಾವಗಡದ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಸೇರಿ ಐವರು ದುರ್ಮರಣಕ್ಕೀಡಾಗಿದ್ದಾರೆ. 43 ಮಂದಿ ಗಾಯಗೊಂಡಿದ್ದಾರೆ.
ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ.
ಕಾಲೇಜು ವಿದ್ಯಾರ್ಥಿಗಳಾದ ಪೋತಗಾನಹಳ್ಳಿ ಅಮೂಲ್ಯ(20), ದಾದಾವಲಿ(20) ಹಾಗೂ ಸೂಲನಾಯಕನಹಳ್ಳಿಯ ಅಜಿತ್ ಕುಮಾರ್(22), ಬೆಸ್ತರಹಳ್ಳಿಯ ಮೆಕಾನಿಕ್ ಶಾನವಾಜ್ (18) ಹಾಗೂ ವೈ.ಎನ್.ಹೊಸಕೋಟೆಯ ಕಲ್ಯಾಣ್ ಕುಮಾರ್(22) ಮೃತಪಟ್ಟಿದ್ದಾರೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟರು.
ಗಾಯಗೊಂಡವರ ಪೈಕಿ 17 ಮಂದಿ ತುಮಕೂರು ಆಸ್ಪತ್ರೆಯಲ್ಲಿ, ಮತ್ತೊಂದು ಆಸ್ಪತ್ರೆಯಲ್ಲಿ 47 ಮಂದಿ, ಇನ್ನು ಕೆಲವರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.