ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು | JANATA NEWS
ತುಮಕೂರು : ಕೆ.ಎಸ್.ಆರ್.ಟಿ.ಸಿ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಮಧುಗಿರಿ ತಾಲೂಕಿನ ಕೆರಗಳಪಾಳ್ಯ ಬಳಿ ಭಾನುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.
ಮಧುಗಿರಿಯ ಗೊಂದಿಹಳ್ಳಿ ಗ್ರಾಮದ ನಿವಾಸಿಗಳಾದ ಸಾಂಬಶಿವಯ್ಯ (70), ಶಂಕರಮ್ಮ (60) ಮೃತಪಟ್ಟ ದುರ್ದೈವಿ.
ಮಧುಗಿರಿಯ ಕಡೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಎದುರುಗಡೆ ಬಂದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಮಧುಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
English summary :KSRTC bus and Bike Accident in tumkur