ತರಬೇತಿ ವೇಳೆ ಐಆರ್ಬಿ ಪೊಲೀಸ್ ಹೃದಯಾಘಾತದಿಂದ ಸಾವು | JANATA NEWS
ವಿಜಯಪುರ : ತರಬೇತಿ ನಿರತ ಐಆರ್ಬಿ ಪೊಲೀಸ್ ಜಾರ್ಖಂಡ್ನಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ರಾಜಕುಮಾರ ಗೋಟ್ಯಾಳ್ (42) ಮೃತ ಐಆರ್ಬಿ ಪೊಲೀಸ್. ಇವರು ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಬರಡೋಲ ಗ್ರಾಮದ ನಿವಾಸಿ. ಇವರು ತರಬೇತಿ ವೇಳೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ತರಬೇತಿಗಾಗಿ ಜಾರ್ಖಂಡ್ಗೆ ತೆರಳಿದ್ದರು. ಇಂದು ರಾಜಕುಮಾರ ಪಾರ್ಥೀವ ಶರೀರ ಬರಡೋಲ ಗ್ರಾಮಕ್ಕೆ ಆಗಮಿಸಿದ್ದು, ಗ್ರಾಮದಲ್ಲಿ ರಾಜಕುಮಾರ ಪಾರ್ಥೀವ ಶರೀರದ ಮೆರವಣಿಗೆ ಮಾಡಿ, ಸಾರ್ವಜನಿಕ ದರ್ಶನಕ್ಕೆ ಅನುವು ಮಾಡಿ ಕೊಡಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯಕ್ರಿಯೆ ನಡೆಸಲಾಯಿತು.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪತ್ನಿ, ಓರ್ವ ಪುತ್ರ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ.
English summary :IRB police die of heart attack during training