ಪಿಂಡ ಪ್ರದಾನ ಮಾಡಲು ಬಂದ ಯುವತಿಯರು ಸಮುದ್ರ ಪಾಲು | JANATA NEWS
ಮಂಗಳೂರು : ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕುಟುಂಬದೊಂದಿಗೆ ಎನ್ಐಟಿಕೆ ಸಮುದ್ರ ತೀರಕ್ಕೆ ಬಂದಿದ್ದ ಸಹೋದರಿಯರಿಬ್ಬರು ನೀರು ಪಾಲಾಗಿದ್ದಾರೆ. ಮಂಗಳೂರು ಶಕ್ತಿನಗರ ನಿವಾಸಿಗಳಾದ ತೃಷಾ(17), ವೈಷ್ಣವಿ(21) ಸಮುದ್ರಪಾಲಾದ ಯುವತಿಯರು ಎಂದು ತಿಳಿದುಬಂದಿದೆ.
ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಮೂವರು ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಈಜುಗಾರರು, ಹೋಮ್ ಗಾರ್ಡ್ ಗಳು ಮೂವರನ್ನು ರಕ್ಷಿಸಿದ್ದರು. ಇನ್ನು ಮೂವರು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ.
ತಮ್ಮ ತಾತನ ತಿಥಿಯ ನಿಮಿತ್ತ ಪಿಂಡ ಪ್ರದಾನ ಮಾಡಲೆಂದು ತಮ್ಮ ಕುಟುಂಬ ವರ್ಗದವರೊಂದಿಗೆ ಈ ಸೋದರ ಸಂಬಂಧಿ ಸಹೋದರಿಯರು ಎನ್ಐಟಿಕೆ ಬಳಿಯಿರುವ ಸಮುದ್ರ ತೀರಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದರು. ಈ ವೇಳೆ ವೆಂಕಟೇಶ್ ಎಂಬವರು ವೈಷ್ಣವಿ ಹಾಗೂ ತ್ರಿಷಾರೊಂದಿಗೆ ಬೀಚ್ನಲ್ಲಿ ಆಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.