ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಈಶ್ವರಪ್ಪ | JANATA NEWS
ಶಿವಮೊಗ್ಗ : ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ, ಎಂದು ಸಚಿವ ಕೆ. ಎಸ್. ಈಶ್ವರಪ್ಪ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರ ಆರೋಪಕ್ಕೆ ನಾನು ರಾಜೀನಾಮೆ ನೀಡಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದರಿಂದಾಗಿ ರಾಜೀನಾಮೆ ನೀಡಲ್ಲ.
ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಮಗ್ರ ತನಿಖೆ ನಡೆಸಲು ಮನವಿ ಮಾಡಿದ್ದೇನೆ. ನಾಳೆ ಅಥವಾ ನಾಡಿದ್ದು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ತಿಳಿಸಿದರು.
ಕಾನೂನು ಬಾಹಿರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಂತಹ ವಿಚಾರದಲ್ಲಿ ಕಾಂಗ್ರೆಸ್ ನವರು ರಾಜೀನಾಮೆ ಕೇಳುತ್ತಿದ್ದಾರೆ. ಡೆತ್ ನೋಟೇ ಬರೆದಿಲ್ಲ. ಸುಳ್ಳು ಹಬ್ಬಿಸಿ ರಾಜೀನಾಮೆ ಕೇಳುತ್ತಿದ್ದಾರೆ. ಸಂತೋಷ್ ಸಾವಿನ ಪ್ರಕರಣ ಬಿಜೆಪಿ ಹೈಕಮಾಂಡ್ ವರೆಗೂ ಹೋಗಿಲ್ಲ.ಹೈಕಮಾಂಡ್ ನಿಂದ ಯಾವುದೇ ಕರೆ ನನಗೆ ಬಂದಿಲ್ಲ ಎಂದರು.
ಸಂತೋಷ್ ಡೆತ್ ನೋಟ್ ಬರೆದಿಲ್ಲ, ವಾಟ್ಸ್ಆಪ್ ನಲ್ಲಿ ಟೈಪ್ ಮಾಡಿದ್ದಾರೆ. ಅಲ್ಲಿ ಕೈ ಬರಹವಿಲ್ಲ, ಸಹಿಯೂ ಇಲ್ಲ ಎಂದರು. ಕಾನೂನು ಬೇಕು ನಿಜ. ಅದಕ್ಕಿಂತಲೂ ಪ್ರಾಮಾಣಿಕತೆ ಮುಖ್ಯ. ಗುತ್ತಿಗೆದಾರರ ಸಂಘದವರು ಯಾರಿಗೆ 40 ಪರ್ಸೆಂಟ್ ಕಮಿಷನ್ ನೀಡಿದ್ದಾರೆ ಎಂದು ನೇರವಾಗಿ ಹೇಳಲಿ.ನಮ್ಮದು ಒಂದು ತಪ್ಪಿದ್ದರೆ ಹೇಳಿ ನಾನು ತಿದ್ದಿಕೊಳ್ಳುತ್ತೇನೆ ಎಂದರು.
ನಾನು ಗುತ್ತಿಗೆದಾರ ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದೆ. ಮಾನನಷ್ಟ ಮೊಕದ್ದಮೆ ಹಾಕಿದ್ದಕ್ಕೆ ಸಂತೋಷ್ ಅವರಿಗೆ ಕೋರ್ಟ್ ನೋಟಿಸ್ ಕೊಟ್ಟಿದೆ ಎಂದ ಅವರು, ಯಾಕೆ ಹೆದರಿದರು ಎನ್ನುವುದು ನನ್ನ ಪ್ರಶ್ನೆ ಎಂದರು.