ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ, ಹಣ ಕೊಟ್ಟರೆ ಸಿಎಂ ಮಾಡ್ತೀನಿ ಎಂಬ ಹೇಳಿಕೆ ಕೊಟ್ಟೇ ಇಲ್ಲ! | JANATA NEWS
ವಿಜಯಪುರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನೇ ಮಾಡಿದರೂ ಅಂಜುವ ಮಗ ನಾನಲ್ಲ. ನಾನು ಅಂಜಿ ರಾಜಕಾರಣ ಮಾಡಲ್ಲ. ಡಿಕೆಶಿಗೆ ನನ್ನ ಭಯ ಹುಟ್ಟಿದೆ. ಕರ್ನಾಟಕದಲ್ಲಿ ರಾಜಕೀಯ ಭವಿಷ್ಯ ಮುಗಿಯುತ್ತದೆ ಎನ್ನುವ ಭಯ ಶುರುವಾಗಿದೆ ಎಂದು ಡಿಕೆಶಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದರು.
ಸಿಎಂ ಆಗಲು ಹೈಕಮಾಂಡ್ ಹಣ ನೀಡುವ ಹೇಳಿಕೆ ನೀಡಿದ ವಿಚಾರ.ನಾನು ಹಾಗೇ ಹೇಳಿಲ್ಲ, ಹೇಳಿದ ಅರ್ಥ ಬೇರೆ ಇದೆ. ಸಿಎಂ ಮಾಡ್ತೀವಿ ಎಂದು ಯಾರೋ ವಾಟ್ಸಾಪ್ ಕಾಲ್ ಮಾಡ್ತಾರೆ.ನಮಗೆ ಮೋದಿ ಗೊತ್ತು.. ಸೋನಿಯಾ ಗಾಂಧಿ ಗೊತ್ತು.. ದೇವೆಗೌಡ್ರು ಗೊತ್ತು ಅಂತಾ ಹೇಳ್ತಾರೆ.ಇಷ್ಟು ಹಣ ತಂದು ಕೊಟ್ಟರೆ ಶಿಫಾರಸ್ಸು ಮಾಡ್ತೀನಿ ಅಂತಾರೆ. ಇದೆಲ್ಲ ರೆಕಾರ್ಡ್ ಇಟ್ಟುಕೊಳ್ಳಲು ಅಗಲ್ಲ, ರೆಕಾರ್ಡ್ ಇಟ್ಟು ರಾಜಕೀಯ ಮಾಡೋಕೆ ಆಗಲ್ಲ ಎಂದರು.
ನಮಗೆ ಕಾಲ್ ಮಾಡಿ ಸೋನಿಯಾ ಗಾಂಧಿ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಇಂತಹವರು ದೇಶದಲ್ಲಿದ್ದಾರೆ, ರಾಜ್ಯದಲ್ಲಿದ್ದಾರೆ, ಬೆಂಗಳೂರಲ್ಲಿಯೂ ಇದ್ದಾರೆ. ನಿಮ್ಮ ಸಿಎಂ ಸೀಟ್ಗಾಗಿ ನಾವು ಟ್ರೈ ಮಾಡುತ್ತೇವೆ. ಇಷ್ಟು ಸಾವಿರ ಕೋಟಿ ರೆಡಿ ಇಡಿ ಎಂದು ಅವರು ನನಗೆ ಹೇಳಿದ್ದರು ಎಂದರು.
ಹೈಕಮಾಂಡ್ ಹಣ ಕೇಳಿದೆ ಅಂತಾ ನಾನು ಹೇಳಿಲ್ಲ, ಪ್ರಧಾನಿ ಮೋದಿ ಅವರ ಕಾಲದಲ್ಲಿ ಇಂತಹದ್ದೆಲ್ಲ ಸಾಧ್ಯವಿಲ್ಲ, ನಾನು ಹೈಕಮಾಂಡ್ ಹಣ ಕೇಳಿದೆ ಅಂತಾ ಹೇಳಿಲ್ಲ, ಏಜೆಂಟರು, ದಲ್ಲಾಳಿಗಳು ಇದ್ದಾರೆ ಎಂದು ಹೇಳಿದ್ದೀನಿ ಹೊರತು ಈ ರೀತಿ ಹೇಳೆ ಇಲ್ಲ ಎಂದರು.