ಶವ ಸಾಗಿಸ್ತಿದ್ದಾಗ ಡಿಸಿ ಕಚೇರಿ ಎದುರೇ ಅಪಘಾತ: ಕೊಲೆ ರಹಸ್ಯ ಬಯಲು | JANATA NEWS
ರಾಮನಗರ : ಮಹಿಳೆಯೊಬ್ಬರನ್ನ ಕೊಲೆ ಮಾಡಿ ಶವವನ್ನು ತಡರಾತ್ರಿ ಬೈಕ್ನಲ್ಲಿ ಶವ ಸಾಗಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿ ಕಚೇರಿ ಎದುರೇ ಆ ಬೈಕ್ ಅಪಘಾತಕ್ಕೀಡಾಗಿದೆ, ಇದರಿಂದ ಕೊಲೆ ರಹಸ್ಯ ಬಯಲಾಗಿದೆ.
ಶ್ವೇತಾ ಕೊಲೆಯಾದ ಮಹಿಳೆ. ಬೈಕ್ ನಲ್ಲಿ ಮಹಿಳೆಯ ಶವ ಇಟ್ಟುಕೊಂಡು ರಾಜರಾಜೇಶ್ವರಿ ನಗರದಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.
ಅಪಘಾತ ನಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಬಿದ್ದಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ಮಹಿಳೆಗೆ ಗಾಯವಾಗಿ ಬಿದ್ದಿದ್ದಾರೆ ಎಂದು ತಿಳಿದು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಈ ವೇಳೆ ಮಹಿಳೆಯನ್ನು ಪರೀಕ್ಷೆ ಮಾಡಿದ ವೈದ್ಯರು, ಈಕೆ ಮೃತಪಟ್ಟು ಹಲವು ಗಂಟೆಗಳೇ ಕಳೆದಿವೆ ಎಂದಿದ್ದಾರೆ. ಬೈಕ್ ಸವಾರರಾದ ನಾಗರಾಜು ಹಾಗೂ ವಿನೋದ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.