ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ! | JANATA NEWS
ಶಿವಮೊಗ್ಗ : ವರದಕ್ಷಿಣೆ ಕಿರುಕುಳ, ಕೌಟಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ನೇಣುಹಾಕಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೋರಡಿ ಗ್ರಾಮದಲ್ಲಿ ನಡೆದಿದೆ.
ಚೋರಡಿ ಗ್ರಾಮದ ನಿವಾಸಿ ಜ್ಯೋತಿ(25) , ಮಕ್ಕಳಾದ ಸಾನ್ವಿ (2) ಹಾಗೂ 11 ತಿಂಗಳ ಕುಶಾಲ್ ಸಾವಿಗೀಡಾದವರು.
ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿಯ ಜ್ಯೋತಿಗೆ ಐದು ವರ್ಷದ ಹಿಂದೆ ಶಿವಮೂರ್ತಿ ಜೊತೆ ವಿವಾಹ ಮಾಡಲಾಗಿತ್ತು. ದಂಪತಿಗೆ ಎರಡು ಮುದ್ದಾದ ಮಕ್ಕಳೂ ಇದ್ದವು. ಮದುವೆ ಆದಾಗಿನಿಂದಲೂ ಜ್ಯೋತಿಗೆ ಪತಿ ಹಾಗೂ ಈತನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತಿದ್ದರು ಎನ್ನಲಾಗಿದೆ.
ಮಗಳ ಮತ್ತು ಮೊಮ್ಮಕ್ಕಳ ಸಾವಿಗೆ ಅಳಿಯ ಮತ್ತು ಆತನ ಕುಟುಂಬಸ್ಥರೇ ಕಾರಣ ಎಂದು ಮೃತಳ ಪಾಲಕರು ಆರೋಪಿಸಿದ್ದಾರೆ. ಪತಿ ಶಿವಕುಮಾರ್ ಹಾಗೂ ಕುಟುಂಬಸ್ಥರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.