ಕೊರೊನಾ ಕುರಿತು ಎಚ್ಚರಿಕೆಯ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು! | JANATA NEWS
ಬಳ್ಳಾರಿ : ಕೊರೊನಾ ಕುರಿತು ಕೋಡಿಮಠದ ಶ್ರೀಗಳು ಎಚ್ಚರಿಕೆಯ ಭವಿಷ್ಯ ನುಡಿದ್ದಾರೆ.
ಬಳ್ಳಾರಿಯಲ್ಲಿ ಇಂದು ಮಾತನಾಡಿದ ಕೋಡಿಮಠದ ಶ್ರೀಗಳು, ಕೋವಿಡ್ ಮತ್ತೆ ಬರುತ್ತದೆ ಎಂದು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅದರಂತೆ ಕರೊನಾ ಪ್ರಕರಣಗಳು ನಿತ್ಯವು ಏರಿಕೆಯಾಗುತ್ತಿದೆ. ಆದರೆ, ಕೊವಿಡ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಒಂದೂವರೆ ವರ್ಷದಲ್ಲಿ ಸಂಪೂರ್ಣವಾಗಿ ಜಗತ್ತಿನಾದ್ಯಂತ ಕೋವಿಡ್ ಕಣ್ಮರೆಯಾಗುತ್ತದೆ. ಆದರೆ, ಕರೊನಾ ಹೋಗುವಾಗ ಜಗತ್ತಿನಾದ್ಯಂತ ಕುಡಿಯುವುದಕ್ಕೆ ನೀರಿಲ್ಲದಂತೆ ಆಗುತ್ತದೆ. ಅಷ್ಟೊಂದು ನೋವನ್ನು ಕೊಡುತ್ತದೆ ಎಂದು ಭಯಾನಕ ಭವಿಷ್ಯ ನುಡಿದರು.
ಮನುಷ್ಯ ಕಷ್ಟ ಬಂದಾಗ ದೇವರು, ಧರ್ಮ ಅಂತಾನೆ ಮತ್ತು ಪ್ರಾರ್ಥನೆ ಮಾಡ್ತಾನೆ. ಕೋವಿಡ್ ನೇರವಾಗಿ ಬಂದು ದೇವರನ್ನೇ ಹಿಡಿದುಕೊಂಡು, ದೇವಸ್ಥಾನಗಳ ಬಾಗಿಲು ಹಾಕಿಸಿತು. ಆಮೇಲೆ ಜನರ ಮೇಲೆ ಬಂತು, ನೀರಿನ ಮೇಲೆ, ಭೂಮಿ ಮೇಲೆ ಬಂತು ಎಂದು ಹೇಳಿದ್ದಾರೆ.
ಮಳೆ ಬಗ್ಗೆ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀಗಳು, ಈ ಹಿಂದೆ ಕಂಡಮಂಡಲ ಆಗುತ್ತೆ ಎಂದಿದ್ದೆ. ಮಲೆನಾಡು ಬಯಲಾಗತ್ತೆ, ಬಯಲು ಮಲೆನಾಡಾಗತ್ತೆ ಎಂದಿದ್ದೆ. ಈಗ ಎಲ್ಲ ಕಡೆ ನೀರು ಕಂಡಮಂಡಲ ಆಗ್ತಾ ಇದೆ. ಮುಂಗಾರು ಮಳೆ ಇನ್ನೂ ಜಾಸ್ತಿಯಾಗೋ ಲಕ್ಷಣ ಕಾಣ್ತಾ ಇದೆ. ಈ ಬಾರಿ ಅಕಾಲಿಕ ಮಳೆ ಆಗುವ ಲಕ್ಷಣವೂ ಇದೆ. ದೊಡ್ಡ ದೊಡ್ಡ ನಗರಗಳಿಗೆ ತೊಂದರೆಯಾಗುತ್ತದೆ ಎಂದರು.
ರಾಜಕೀಯದ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಶ್ರೀಗಳು, ರಾಜಕೀಯ ಅಸ್ಥಿರ ಅಂತಾ ಮೊದಲೇ ಹೇಳಿದ್ದೆ. ಗುಂಪುಗಳಾಗ್ತಾವೆ ಅಂದಿದ್ದೆ. ಅದನ್ನು ಈಗ ಕಂಡುಕೊಂಡಿದ್ದೀರಾ. ನಾನು ಭಾರತ ದೇಶದಲ್ಲಿ ಅವಘಡ ಆಗುತ್ತೆ ಎಂದಿದ್ದೆ. ಅದು ಈಗ ಪ್ರಾರಂಭವಾಗಿದೆ ಎಂದರು.