ತುಮಕೂರಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ಬರ್ಬರ ಹತ್ಯೆ | JANATA NEWS
ತುಮಕೂರು : ಗುಬ್ಬಿ ಪಟ್ಟಣದ ಬಿ.ಎಸ್.ರಸ್ತೆಯಲ್ಲಿ ಹಾಡಹಗಲೇ ಡಿಎಸ್ಎಸ್ ಮುಖಂಡ, ಗುಬ್ಬಿ ಪಟ್ಟಣ ಪಂಚಾಯಿತಿ 9ನೇ ವಾರ್ಡ್ನ ಮಾಜಿ ಸದಸ್ಯ ನರಸಿಂಹಮೂರ್ತಿ ಅಲಿಯಾಸ್ ಕುರಿಮೂರ್ತಿ(45) ಬರ್ಬರ ಹತ್ಯೆ ನಡೆದಿದೆ.
ನರಸಿಂಹಮೂರ್ತಿ(ಕುರಿ ಮೂರ್ತಿ) ಕೊಲೆಯಾದವರು. ಗುಬ್ಬಿ ತಾಲೂಕು ಡಿಎಸ್ಎಸ್ ಸಂಘದ ಸಂಚಾಲಕನಾಗಿದ್ದ ಕುರಿ ಮೂರ್ತಿ ಅವರು ಗುಬ್ಬಿ ಪಟ್ಟಣದ ಟೀ ಅಂಗಡಿ ಮುಂದೆ ಕುಳಿತ್ತಿದ್ದರು. ಇಂದು ಮಧ್ಯಾಹ್ನ 1 ಗಂಟೆ ವೇಳೆ ಅಂಗಡಿ ಬಳಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂಗೆ ಮನಸೋಇಚ್ಛೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಹಣದ ವಿಚಾರವಾಗಿ ಹಳೆ ದ್ವೇಷಕ್ಕೆ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ತುಮಕೂರು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮೃತದೇಹ ರವಾನಿಸಲಾಗಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.