ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ಅವತಾರದಲ್ಲಿದ್ದಾರೆ: ಶ್ರೀರಾಮುಲು | JANATA NEWS
ಕೊಪ್ಪಳ : ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿದ್ದಾರೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಸರಣಿ ಟ್ವೀಟ್ ಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಟಾಂಗ್ ನೀಡಿದ್ದು ಸಿದ್ದರಾಮಯ್ಯ ಮೂರ್ಖರ ರೀತಿ ಮಾತಾಡ್ತಾರೆ ಎಂದಿದ್ದಾರೆ.
ನರೇಂದ್ರ ಮೋದಿ ಶ್ರೀ ಕೃಷ್ಣನ ಅವತಾರದಲ್ಲಿರುವವರು. ಮಹಾಭಾರತದಲ್ಲಿ ಶ್ರೀ ಕೃಷ್ಣ ಹೇಗೆ ಪಾತ್ರ ವಹಿಸಿದ್ದರೋ, ಹಾಗೇ ಭಾರತದ ಪ್ರಗತಿಯಲ್ಲಿ ಮೋದಿ ಶ್ರೀಕೃಷ್ಣನ ಅವತಾರದಲ್ಲಿದ್ದಾರೆ. ನವ ಭಾರತ ನಿರ್ಮಾಣಕ್ಕೆ ಮೋದಿ ಬಹಳ ಶ್ರಮಿಸುತ್ತಾರೆ. ಮೋದಿ ಜನ ಪ್ರಿಯತೆ ಸಹಿಸದೇ ಸಿದ್ದರಾಮಯ್ಯ ಮೂರ್ಖರ ರೀತಿ ಮಾತನಾಡುತ್ತಿದ್ದಾರೆ ಎಂದು ಇರುಗೇಟು ನೀಡಿದ್ದಾರೆ.
ಮೋದಿಜಿಯವರ ಬಗ್ಗೆ ಟೀಕೆ ಮಾಡೋದಕ್ಕೆ ಮೋದಿ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ. ಅಧಿಕಾರಕ್ಕೆ ಬರಲ್ಲ ಅನ್ನೋ ಹತಾಶೆ ಕಾಂಗ್ರೆಸ್ ನಾಯಕರಿಗಿದೆ ಎಂದ ರಾಮುಲು ನಿಮ್ಮ ಪ್ರಧಾನಿ ಮನ್ ಕೀ ಬಾತ್ ಮಾಡಿದ ಉದಾಹರಣೆ ಇದೆಯಾ? ಕಾಂಗ್ರೆಸ್ ಪ್ರಧಾನಿ ದೆಹಲಿಗೆ ಸೀಮಿತವಾಗಿದ್ದರು. ನಮ್ಮ ಪ್ರಧಾನಿ ಹಳ್ಳಿ ಹಳ್ಳಿಗೂ ತಲುಪಿದ್ದಾರೆ ಎಂದು ಹೇಳಿದ್ದಾರೆ.
ಅಗ್ನಿಪಥ್ ಯೋಜನೆ ವಿರುದ್ದ ಕಾಂಗ್ರೆಸ್ ಷಡ್ಯಂತ್ರ ಮಾಡ್ತಿದೆ. ದೇಶದ ಸೈನಿಕನಾದ್ರೆ ಅವನಿಗೆ ಅವನದೇ ಆದ ಕ್ರೆಡಿಬಿಲಿಟಿ ಬರುತ್ತೆ ಎಂದು ರಾಮುಲು ಹೆಮ್ಮೆಪಟ್ಟಿದ್ದಾರೆ.
ಬಾಗಲಕೋಟೆ ಡಿಸಿ ಸಿದ್ದರಾಮಯ್ಯ ಅವರು ತರಟೆ ತೆಗೆದುಕೊಂಡ ವಿಚಾರವಾಗಿ ಮಾತನಾಡಿದ ಶ್ರೀರಾಮುಲು ಅವರು, ಸಿದ್ದರಾಮಯ್ಯ ಸಂಸ್ಕಾರ ಇಲ್ಲದ ವ್ಯಕ್ತಿ. ನಾನು ಅವರ ಬಗ್ಗೆ ಮಾತನಾಡಲ್ಲ. ಪ್ರೋಟೋಕಾಲ್ ಪ್ರಕಾರ ಹೆಸರು ಬರಬೇಕಾಗತ್ತದೆ. ಇದೀಗ ಹೆಸರು ಹಾಕಬೇಡಿ ಎಂದಿದ್ದಾರೆ. ಬದಾಮಿ ಜನ ಸಿದ್ದರಾಮಯ್ಯರನ್ನು ತಿರಸ್ಕಾರ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಹುಡಕತಾ ಹೋಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.