Thu,Mar19,2026
ಕನ್ನಡ / English

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಒಬ್ಬ ಸಜೀವ ದಹನ, ಮೂವರು ಗಂಭೀರ | JANATA NEWS

29 Jun 2022

ಯಾದಗಿರಿ : ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಎಂಬ ವ್ಯಕ್ತಿ ಯಾಗಿದ್ದಾನೆ. ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ.

ಕೆಲ ದಿನಗಳಿಂದ ಪತಿ ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ಜಗಳವಾಗಿತ್ತು. ಈ ಸಂಬಂಧ ಶರಣಪ್ಪನಿಗೆ ಬುದ್ಧಿ ಹೇಳಲು ಪತ್ನಿ ಹುಲಿಗೆಮ್ಮಳ ತಂದೆ ಹಾಗೂ ಮೂವರು ಸಂಬಂಧಿಕರು ಬಂದಿದ್ದರು. ಈ ವೇಳೆ ಶರಣಪ್ಪ ನಾಲ್ಕು ಜನರನ್ನು ಕೋಣೆಯಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಗಮ್ಮ ರಾಯಚೂರು ಜಿಲ್ಲೆಯ ಲಿಂಗಸೂರಿನ ಕೆಎಸ್ಆರ್ಟಿಸಿ ಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಳು. ಹುಲಿಗೆಮ್ಮ ಕಳೆದ 14 ತಿಂಗಳಿನಿಂದ ಬೇರೆ ಕಡೆ ಮನೆ ಮಾಡಿಕೊಂಡಿದ್ದಳು. ಶರಣಪ್ಪ ಹೆಂಡತಿ ಹುಲಿಗೆಮ್ಮಗೆ ವಿಚ್ಚೇದನ ಕೇಳಿದ್ದನು. ಆದರೆ ಹುಲಿಗೆಮ್ಮ ವಿಚ್ಚೇದನ ನೀಡಲು ನಿರಾಕರಿಸಿದ್ದಳು. ಹುಲಿಗೆಮ್ಮ ಪತಿಯೊಂದಿಗೆ ಮಾತನಾಡಲು ಹುಲಿಗಮ್ಮ ತಂದೆ ಹಾಗೂ ಸಂಬಂಧಿಕರು ಇಂದು ಬೆಳಗ್ಗೆ ಶರಣಪ್ಪನ ಮನೆ ನಾರಾಯಣಪುರಕ್ಕೆ ಬಂದಿದ್ದರು. ಆದರೆ ಹುಲಿಗೆಮ್ಮ ನಾರಾಯಣಪುರಕ್ಕೆ ನಾನು ಬರಲ್ಲ ನೀವೆ ಮಾತಾಡಿ ಎಂದು, ಕೆಲಸಕ್ಕೆ ಹೋಗಿದ್ದಳು. ಜೊತೆಗೆ ಪೋಷಕರಿಗೂ ಸಹ ಮಾತಾಡಲು ಹೋಗಬೇಡಿ ಎಂದಿದ್ದಳು.

ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ

RELATED TOPICS:
English summary :The husband who set fire to his wife s parents who came to mind, one of them burnt alive, three serious

ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ಹಾರ್ಮುಜ್ ಜಲಸಂಧಿಯಿಂದ ಮುಂಬೈ ತಲುಪಿದ ಭಾರತದ ಮೊದಲ ಟ್ಯಾಂಕರ್‌
ಹಾರ್ಮುಜ್ ಜಲಸಂಧಿಯಿಂದ ಮುಂಬೈ ತಲುಪಿದ ಭಾರತದ ಮೊದಲ ಟ್ಯಾಂಕರ್‌
48,000 ಮೆಟ್ರಿಕ್ ಟನ್ ನಾಫ್ತಾವನ್ನು ಸಾಗಿಸುತ್ತಿದ್ದ ತೈಲ ಟ್ಯಾಂಕರ್ ಎಂಟಿ ಸೇಫ್ಸೀ ವಿಷ್ಣು ಮೇಲೆ ದಾಳಿ
48,000 ಮೆಟ್ರಿಕ್ ಟನ್ ನಾಫ್ತಾವನ್ನು ಸಾಗಿಸುತ್ತಿದ್ದ ತೈಲ ಟ್ಯಾಂಕರ್ ಎಂಟಿ ಸೇಫ್ಸೀ ವಿಷ್ಣು ಮೇಲೆ ದಾಳಿ

ನ್ಯೂಸ್ MORE NEWS...