ವೃದ್ಧೆಯ ಹೊಟ್ಟೆ ಕೊಯ್ದು ಹಾಗೆ ಬಿಟ್ಟ ವೈದ್ಯ | JANATA NEWS
ದಾವಣಗೆರೆ : ವೈದ್ಯನ ನಿರ್ಲಕ್ಷ್ಯದಿಂದ ವೃದ್ಧೆ 20 ದಿನ ನರಳಿ ನರಳಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಕೆಆರ್ ರಸ್ತೆಯಲ್ಲಿರುವ ಗುರುನಾಥ್ ಬೊಂದಡೆ ಆಸ್ಪತ್ರೆಯಲ್ಲಿ ನಡೆದಿದೆ.
65 ವರ್ಷದ ಅನ್ನಪೂರ್ಣಮ್ಮ ಎಂಬ ಅಜ್ಜಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಿಸಿಕೊಂಡು ವೈದ್ಯ ದೀಪಕ್ ಬೊಂದಡೆ, ವೃದ್ಧೆಯ ಹೊಟ್ಟೆ ಕೊಯ್ದು ಹಾಗೆಯೇ ಬಿಟ್ಟಿದ್ದಾನೆ. ಹೀಗೆ ಆಪರೇಷನ್ ಮಾಡಿ 15 ದಿನ ಆದರೂ ಹೊಲಿಗೆ ಹಾಕಿಲ್ಲ.
ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಕೇಳಿದರೆ ತನ್ನಷ್ಟಕ್ಕೆ ತಾನೇ ಕೂಡಿಕೊಳ್ಳುವುದು ಎಂದಿದ್ದಾರೆ. ಅದಕ್ಕೆ ಆಸ್ಪತ್ರೆ ಸಿಬ್ಬಂದಿ ಕೂಡ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನು ಮತ್ತೊಂದು ಕಡೆ ಆಸ್ಪತ್ರೆಯವರು ಯಾವುದೇ ಬಿಲ್ ನೀಡದೆ 3 ಲಕ್ಷಕ್ಕೂ ಅಧಿಕ ಬಿಲ್ ಕಟ್ಟಿಸಿಕೊಂಡಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಮಕ್ಕಳು ವೃದ್ದೆಯನ್ನು ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ.
ಇದೀಗ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷದಿಂದ ವೃದ್ಧೆ ಸಾವನ್ನಪ್ಪಿದ ಹಿನ್ನೆಲೆ ಖಾಸಗಿ ಆಸ್ಪತ್ರೆಯ ಮುಂದೆ ಮೃತದೇಹವನ್ನು ಇಟ್ಟು ತಾಯಿ ಜೀವ ಕಳೆದಿದ್ದಾನೆ ಎಂದು ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ.