ಕೃಷ್ಣಾ ನದಿಯಲ್ಲಿ ಮೊಸಳೆ ದಾಳಿಗೆ ಮತ್ತೊಂದು ಬಲಿ | JANATA NEWS
ವಿಜಯಪುರ : ಮೊಸಳೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್ಲ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ನಡೆದಿದೆ.
ಮೃತನನ್ನು ಹಂಡರಗಲ್ಲ ಗ್ರಾಮದ ನಾಗಪ್ಪ ಸಂಜಿವಪ್ಪ ಉಂಡಿ (55) ಎಂದು ಗುರುತಿಸಲಾಗಿದೆ. ಕಳೆದ ವಾರ ಇದೇ ಭಾಗದಲ್ಲಿ ಹಂಡರಗಲ್ಲ ಪಕ್ಕದ ನಾಗರಾಳ ಗ್ರಾಮದ ವ್ಯಕ್ತಿಯನ್ನು ಮೊಸಳೆ ಬಲಿ ಪಡೆದಿತ್ತು.
ಮೃತ ಕುರಿಗಾಯಿ ನದಿ ದಡಕ್ಕೆ ಕುರಿ ಮೇಯಿಸಲು ಹೋದಾಗ ಮೊಸಳೆ ದಾಳಿ ಮಾಡಿದ್ದು, ವ್ಯಕ್ತಿಯ ಮೃತದೇಹ ನದಿಯಲ್ಲಿ ತೇಲಿ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ.
ಮೊಸಳೆ ದಾಳಿಯಿಂದ ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಸ್ಥಳಕ್ಕೆ ಅರಣ್ಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
RELATED TOPICS:
English summary :Another victim of crocodile attack in Krishna river