ಹಾಡಹಗಲೇ ಮಾರಕಾಸ್ತ್ರಗಳಿಂದ ನಗರಸಭೆ ಮಾಜಿ ಅಧ್ಯಕ್ಷನ ಬರ್ಬರ ಕೊಲೆ! | JANATA NEWS
ಕಲಬುರಗಿ : ಹಾಡಹಗಲೇ ಜನನಿಬಿಡ ಪ್ರದೇಶವಾದ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಗರಸಭೆ ಮಾಜಿ ಅಧ್ಯಕ್ಷನನ್ನ ಬರ್ಬರವಾಗಿ ಕೊಲೆ ಘಟನೆ ನಡೆದಿದೆ.
ಶಹಬಾದ್ ನಗರಸಭೆ ಮಾಜಿ ಅಧ್ಯಕ್ಷ, ನಗರಸಭೆಯ ಹಾಲಿ ಅಧ್ಯಕ್ಷೆಯ ಪತಿ ಗಿರೀಶ್ ಕಂಬಾನುರ್ ಕೊಲೆಗೀಡಾದ ವ್ಯಕ್ತಿ. ರೈಲು ಟಿಕೆಟ್ ಬುಕ್ ಮಾಡಲು ಶಹಬಾದ ರೈಲ್ವೆ ನಿಲ್ದಾಣಕ್ಕೆ ಬಂದಾಗ ಏಕಾಏಕಿ ಗಿರೀಶ್ ಮೇಲೆ ಎರಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ದಾಳಿ ಮಾಡಿ, 15 ರಿಂದ 20 ಬಾರಿ ಇರಿದಿದ್ದಾರೆ. ಬಳಿಕ ತಲವಾರ್ನಿಂದ ಎದೆಗೆ ಚುಚ್ಚಿ ಅದನ್ನು ಹಾಗೇ ಇಟ್ಟು ಹೋಗಿದ್ದಾರೆ.
ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :The barbaric murder of the former chairman of the city council with handguns!