ನಾನು ಸಿಎಂ ಆಗಿದ್ದಾಗ ಪಿಎಸ್ ಐ ಹಗರಣ ನಡೆದಿದ್ದರೆ ಅಶ್ವತ್ಥ್ ನಾರಾಯಣ ಕಡುಬು ತಿಂತಿದ್ನಾ? | JANATA NEWS
ಕಲಬುರಗಿ : ನಾನು ಮುಖ್ಯಮಂತ್ರಿಯಾಗಿದ್ದಾಗ ಹಗರಣ ನಡೆದಿದ್ದರೆ, ಆಗ ವಿರೋಧಪಕ್ಷದಲ್ಲಿದ್ದ ಅಶ್ಥಥ್ ನಾರಾಯಣ ಕಡುಬು ತಿಂತಿದ್ನಾ ಇಲ್ಲ ಕಳ್ಳೆಪುರಿ ತಿಂತಿದ್ನಾ ಎಂದು ಪ್ರಶ್ನಿಸಿದರು.
ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಮುಂಚಿತವಾಗಿ ಯಾವ ಕ್ರಮ ತೆಗೆದುಕೊಳ್ಳಲ್ಲ. ಜನರಿಗೆ, ರೈತರಿಗೆ ನಷ್ಟವಾದಮೇಲೆ ಅದನ್ನು ನೋಡೋಕೆ ಹೋಗ್ತಾರೆ. ಕಳೆದ ಎರಡು ವಾರದಿಂದ ಮಳೆ ಬೀಳುತ್ತಿದೆ ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಯಾರೂ ಜಿಲ್ಲೆಗಳಿಗೆ ಹೋಗಿಲ್ಲ, ಮುಖ್ಯಮಂತ್ರಿಗಳು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಹೋದಮೇಲೆ ಇವರು ಹೊರಟಿದ್ದಾರೆ. ಪ್ರವಾಹ ಬರಲಿದೆ ಎಂದು ಗೊತ್ತಿದ್ದೂ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ ಎಂದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಅಶ್ವತ್ಥ ನಾರಾಯಣ ವಿರೋಧ ಪಕ್ಷದಲ್ಲಿದ್ದರು ಅಲ್ವಾ? ಆಗ ಏನಾದ್ರೂ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಅವರು ಮಾತನಾಡಿದ್ರಾ? ಈಗ ತಮ್ಮ ಕಾಲದಲ್ಲಿ ಹಗರಣ ಬೆಳಕಿಗೆ ಬಂದ ಮೇಲೆ ಸಿದ್ದರಾಮಯ್ಯ ಸರ್ಕಾರದಲ್ಲೂ ಆಗಿತ್ತು ಅಂದರೆ ಹೇಗೆ? ಆಗೇನು ಕಡ್ಲೆಪುರಿ ತಿಂತಿದ್ರಾ? ಮಾಹಿತಿ ಇದ್ದಿದ್ದರೆ ಆಗಲೇ ಸದನದಲ್ಲಿ ಪ್ರಸ್ತಾಪ ಮಾಡಬಹುದಿತ್ತು, ನ್ಯಾಯಾಲಯಕ್ಕೂ ಹೋಗಬಹುದಿತ್ತು ಎಂದು ವಾಗ್ಧಾಳಿ ನಡೆಸಿದರು.