ವಿಧಾನಸಭೆ ಎಲೆಕ್ಷನ್ನಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ! | JANATA NEWS
ಮಂಡ್ಯ : ವಿಧಾನಸಭೆಗೆ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಮನಗರ, ಚನ್ನಪಟ್ಟಣ ಹಾಗೂ ಇತರೇ ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಅವರ ತಾಯಿ ಅನಿತಾ ಕುಮಾರಸ್ವಾಮಿ ಅವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ನಿಖಿಲ್ ಅವರು ಸದ್ಯ ಪಕ್ಷ ಸಂಘಟನೆಯಲ್ಲಿ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಆದರೆ ನಿಖಿಲ್ ಯಾವುದೇ ಕಾರಣಕ್ಕೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದರು.
ಮಂಡ್ಯದ ಟ್ರಯಲ್ ಬ್ಲಾಸ್ಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆ.ಆರ್.ಎಸ್. ಭಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕಾ? ಬೇಡ್ವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಟ್ರಯಲ್ ಬ್ಲಾಸ್ಟ್ ನಡೆಸೋದನ್ನ ಸರ್ಕಾರ ನಿಲ್ಲಿಸಿದೆ. ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಭಾಗದಲ್ಲಿ ರೈತರು ಆತಂಕದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದರು.