ಶಾಲೆಯಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು, ಪೋಷಕರ ಆಕ್ರಂದನ | JANATA NEWS
ರಾಯಚೂರು : ಶಾಲೆಯಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ 8ನೇ ತರಗತಿ ಓದುತ್ತಿದ್ದ ಮಲ್ಲಿಕಾರ್ಜುನ ಸಾವನ್ನಪ್ಪಿದ ವಿದ್ಯಾರ್ಥಿ. ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ
ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ನಿರ್ಮಾಣ ಹಂತದ ಬಿಸಿಯೂಟ ಕೋಣೆಯ ಟೆರೇಸ್ ಮೇಲೆ ಬಿದ್ದಿದೆ. ಆಗ ಮಲ್ಲಿಕಾರ್ಜುನ ಚೆಂಡು ತರಲು ಮೇಲೆ ಹೋಗಿದ್ದಾನೆ. ಆ ವೇಳೆ ನಿರ್ಮಾಣ ಹಂತದಲ್ಲಿರುವ ಬಿಸಿಯೂಟದ ಕೋಣೆಯ ಮೇಲಿನ ವಿದ್ಯುತ್ ತಂತಿ ತಗುಲಿದೆ.
ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Student killed by electric wire in school, parents protest!