ನಮಗೆ ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ: ಆರಗ ಜ್ಞಾನೇಂದ್ರ | JANATA NEWS
ಶಿವಮೊಗ್ಗ : ನಮಗೆ ಸಿದ್ದರಾಮಯ್ಯ ಅವರ ಸರ್ಟಿಫಿಕೇಟ್ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜೀನಾಮೆ ಕೇಳಲು ಸಿದ್ದರಾಮಯ್ಯ ಅವರಿಗೆ ಏನು ನೈತಿಕತೆ ಇದೆ. ನಿಮ್ಮ ಅವಧಿಯಲ್ಲಿ ಏನೇನು ನಡೆದಿದೆ ಎಂಬುದು ನಮಗೂ ಅರಿವಿದೆ. ಮತೀಯ ಸಂಘಟನೆ ಕೇಸ್ ವಾಪಸ್ ಪಡೆದಿದ್ದಾರೆ. ಅವರ ಅಧಿಕಾರದ ಸಮಯದಲ್ಲಿ ಪೊಲೀಸರು ಧರಣಿ ನಡೆಸಿದ್ದರು.
ತಾನು ಅವರ ಹಿರಿತನವನ್ನು ಗೌರವಿಸುತ್ತೇನೆ. ಅವರ ಕಾಲದಲ್ಲಿ ಪೊಲೀಸ್ ಇಲಾಖೆ ಕೆಂಪಯ್ಯ ಕೈಯಲ್ಲಿತ್ತು. ಅವರ ಅಧಿಕಾರದ ಅವಧಿಯಲ್ಲಿ ಒಟ್ಟು 32 ಕೊಲೆಗಳಾಗಿತ್ತು. ನಿಮ್ಮ ಸರ್ಟಿಫಿಕೇಟ್ ನಮಗೆ ಬೇಕಿಲ್ಲ. ಸಿದ್ದರಾಮಯ್ಯ ಸಿಎಂ ಆದಾಕ್ಷಣ ಮತಾಂಧ ಶಕ್ತಿಗಳ ಮೇಲಿದ್ದ 2000 ಕೇಸ್ ಹಿಂಪಡೆದರು. ಟಿಪ್ಪು ಜಯಂತಿ ಆರಂಭಿಸುವ ಮೂಲಕ ರಕ್ತಪಾತ ಮಾಡಿಸಿದರು. ವೋಟ್ ಬ್ಯಾಂಕ್ ನಿರ್ಮಾಣಕ್ಕಾಗಿ ಯಾರು ಯಾರನ್ನೋ ಬೆಳೆಸಿಟ್ಟರು ಎಂದು ವಾಗ್ದಾಳಿ ನಡೆಸಿದರು.
ನಾನು ಸಮರ್ಥವಾಗಿ ಇಲಾಖೆಯನ್ನು ನಿಭಾಯಿಸಿದ್ದೇನೆ. ಸಚಿವನಾದ ಬಳಿಕ ಪ್ರತಿ ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿದ್ದೇನೆ. ಮಂಗಳೂರು ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತೇವೆ. ಎನ್ ಕೌಂಟರ್ ಗಳು ಹಾಗೂ ಸಾವಿಗೆ ಇನ್ನೊಂದು ಸಾವು ಪರಿಹಾರವಲ್ಲ. ಶಾಂತಿ ಸಭೆ ನಡೆಯುತ್ತಿದೆ. ಪೊಲೀಸರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು