ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಮಾರ್ಗದಲ್ಲೇ ದುರ್ಮರಣ! | JANATA NEWS
ರಾಯಚೂರು : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದಾರೆ.
ಬಸವರಾಜ್ ಮಾಸಳಿ(40), ಬಸವರಾಜ್ರ ಪುತ್ರ ನರೇಶ್(8) ಮತ್ತು ಚಿಕ್ಕಮ್ಮ ಭೀಮವ್ವ ಮಾಸಳಿ(50) ಮೃತ ದುರ್ದೈವಿಗಳು.
ಮೃತರೆಲ್ಲರೂ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಗಳು. ಸಂಬಂಧಿಕರೊಬ್ಬರು ಮೃತಪಟ್ಟಿದ್ದ. ಅವರ ಅಂತ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಈ ಮೂವರು ಒಂದೇ ಬೈಕ್ನಲ್ಲಿ ಕಲ್ಲೂರಿನಿಂದ ಕುರ್ಡಿ ಗ್ರಾಮಕ್ಕೆ ಹೊರಟಿದ್ದರು.
ಈ ವೇಳೆ ರಾಯಚೂರು ಮಾರ್ಗವಾಗಿ ಹೊರಟಿದ್ದ ಟಿಪ್ಪರ್ ವೇಗವಾಗಿ ಬಂದು ಗುದ್ದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆಬದಿಯ ಜಮೀನಿನತ್ತ ನುಗ್ಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಾರಿ ಚಾಲಕ ಪರಾರಿಯಾಗಿದ್ದಾನೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.