ಮಂಗಳೂರಲ್ಲಿ 3800 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗೆ ಪ್ರಧಾನಿ ಮೋದಿ ಚಾಲನೆ | JANATA NEWS
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಿದ್ದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ರೂ. 3,800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಚಾಲನೆ ನೀಡಿದ ನಂತರ ಜನರನ್ನುದ್ದೇಶಿಸಿ ಮಾತನಾಡಿದರು.
ಮಂಗಳೂರಿನಲ್ಲಿ ಮಾತನಾಡಿದ ನರೇಂದರ ಮೋದಿ, ರಾಷ್ಟ್ರ ಸೈನ್ಯದ ಸುರಕ್ಷಿತವಾಗಿದ್ದರೆ ಆರ್ಥಿಕವಾಗಿ ಭಾರತ ಸುರಕ್ಷಿತವಾಗಿರತ್ತದೆ ಎಂದರು. ಮಂಗಳೂರಲ್ಲಿ 3800 ಕೋಟಿ ಮೊತ್ತದ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ, ಭೂಮಿ ಪೂಜೆ ಆಗಿದೆ. ಕರ್ನಾಟಕದಲ್ಲಿ ಈ ಯೋಜನೆಗಳ ಮೂಲಕ ಹುದ್ದೆಗಳು ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದರು. ಈ ಯೋಜನೆಗಳಿಂದ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ, ಈ ಮೂಲಕ ಮೀನುಗಾರರು ತಮ್ಮ ಮಾರುಕಟ್ಟೆ ವಿಸ್ತರಣೆ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಮಂಗಳೂರು ಬಂದರು ವಿಸ್ತರಣೆ ಆಗಿದೆ. ಮಂಗಳೂರಿನ ಮೀನುಗಾರರ ಗಳಿಕೆ ಹೆಚ್ಚಿಸಲು ಯೋಜನೆ ತಂದಿದ್ದೇವೆ. ಕರ್ನಾಟಕದ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಯೋಜನೆಗಳಿಂದ ಕರ್ನಾಟಕದಲ್ಲಿ ವ್ಯಾಪಾರ ಹೆಚ್ಚಳವಾಗಲಿದೆ. ಕರ್ನಾಟಕದಲ್ಲಿ ಉದ್ಯೋಗ, ಉದ್ದಿಮೆ ಹೆಚ್ಚಾಗಲಿದೆ ಅಂತಾ ಮೋದಿ ಹೇಳಿದರು.
ಡಬಲ್ ಇಂಜಿನ್ ಸರ್ಕಾರದ ಕುರಿತು ನನಗೆ ಖುಷಿ ಇದೆ ಎಂದ ಪ್ರಧಾನಿ ನರೇಂದ್ರ ಮೋದಿ, ತೀವ್ರಗತಿಯಲ್ಲಿ ಅಭಿವೃದ್ಧಿಯ ಕಾರ್ಯಕ್ರಮ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾಷಣದ ವೇಳೆ ರಾಜ್ಯದ ರಾಣಿ ಅಬ್ಬಕ್ಕ, ರಾಣಿ ಚೆನ್ನ ಭೈರಾದೇವಿ ಅವರನ್ನು ಪ್ರಧಾನಿ ಮೋದಿ ನೆನಪಿಸಿಕೊಂಡರು. ಬ್ರಿಟೀಷರಿಂದ ತಮ್ಮ ರಾಜ್ಯ ಉಳಿಸಿಕೊಳ್ಳಲು ಹೋರಾಡಿದ್ದು ನಮಗೆ ಎಂದೆಂದಿಗೂ ಸ್ಪೂರ್ತಿ. ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇವರ ಹೋರಾಟ ನೆನೆಯುತ್ತೇನೆ ಎಂದು ಮೋದಿಯವರು ಹೇಳಿದ್ದಾರೆ.
ಬಂದರಿನಲ್ಲಿ 281 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿನ ಬರ್ತ್ 14ರ ಯಾಂತ್ರೀಕರಣ ಉದ್ಘಾಟನೆ
1,829 ಕೋಟಿ ರೂ. ವೆಚ್ಚದ ಎಂಆರ್ಪಿಎಲ್ ಬಿಎಸ್ VI ಉನ್ನತೀಕರಣ ಯೋಜನೆ ಉದ್ಘಾಟನೆ
677 ಕೋಟಿ ರೂ. ವೆಚ್ಚದ ಎಂಆರ್ಪಿಎಲ್ ಸಮುದ್ರದ ಉಪ್ಪು ನೀರು ಶುದ್ಧೀಕರಣ ಘಟಕ ಲೋಕಾರ್ಪಣೆ
500 ಕೋಟಿ ರೂ. ವೆಚ್ಚದಲ್ಲಿ ಬಂದರಿನಲ್ಲಿ ನಿರ್ಮಿಸಿರುವ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಉದ್ಘಾಟನೆ
100 ಕೋಟಿ ರೂ. ವೆಚ್ಚದಲ್ಲಿ ಬಂದರಿನಲ್ಲಿ ನಿರ್ಮಿಸಲಾಗುವ ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರಕ್ಕೆ ಶಿಲಾನ್ಯಾಸ
100 ಕೋಟಿ ರೂ. ವೆಚ್ಚದಲ್ಲಿ ಬಂದರಿನಲ್ಲಿ ನಿರ್ಮಾಣವಾಗುವ ಬಿಟುಮೆನ್ ಶೇಖರಣಾ ಟ್ಯಾಂಕ್ ಘಟಕಗಳಿಗೆ ಶಿಲಾನ್ಯಾಸ
100 ಕೋಟಿ ರೂ. ವೆಚ್ಚದಲ್ಲಿ ಬಂದರಿನಲ್ಲಿ ಬಿಟುಮೆನ್, ಖಾದ್ಯ ತೈಲ ಶೇಖರಣಾ ಟ್ಯಾಂಕುಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣಕ್ಕೆ ಶಿಲಾನ್ಯಾಸ
196 ಕೋಟಿ ರೂಪಾಯಿ ವೆಚ್ಚದಲ್ಲಿ ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣಕ್ಕೆ ಶಿಲಾನ್ಯಾಸ
ಸಮಾವೇಶ ನಡೆಯುವ ಮೈದಾನಕ್ಕೆ ಆಗಮಿಸಿದ ಪ್ರಧಾನಿ ಅವರು ವಿವಿಧ ಯೋಜನೆಗಳ 3ಡಿ ಮಾಡೆಲ್ ವೀಕ್ಷಿಸಿದರು.