ಶಿವಮೊಗ್ಗದ ಚೂರಿ ಇರಿತ ಪ್ರಕರಣ, ಪ್ರಮುಖ ಆರೋಪಿಗೆ ಭಯೋತ್ಪಾದಕರ ಜೊತೆ ಲಿಂಕ್ ಇದೆ -ಸಚಿವ ಆರಗ ಜ್ಞಾನೇಂದ್ರ | JANATA NEWS
ಶಿವಮೊಗ್ಗ : ಪ್ರೇಮ್ಸಿಂಗ್ಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಜಬೀ ಲಿಂಕ್ ಭಯಾನಕವಾಗಿದೆ.
ಆರೋಪಿಗೆ ಭಯೋತ್ಪಾದಕರ ಜೊತೆ ಲಿಂಕ್ ಇದೆ, ಸದ್ಯದಲ್ಲೇ ಈ ಪ್ರಕರಣವನ್ನು ಎನ್ ಐಎ ಗೆ ಹಸ್ತಾಂತರ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಶಾಂತಿಗಾಗಿ ಕಾಲ್ನಡಿಗೆ ಜಾಥಾ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ”ಶಿವಮೊಗ್ಗ ಸಂಪೂರ್ಣ ಶಾಂತಿಯುತವಾಗಿದೆ.ಆಗಾಗ ಆಕಸ್ಮಿಕ ಘಟನೆಗಳು ನಡೆಯುತ್ತವೆ ಅಷ್ಟೇ. ಉಗ್ರರ ಜೊತೆ ಲಿಂಕ್ ಇದ್ದವರೊಂದಿಗೆ ಶಾಂತಿ ನಡಿಗೆ ನಡೆಸಲಿ. ರಾಜಕೀಯ ಪಕ್ಷ ಹೊರತುಪಡಿಸಿ ಕಾರ್ಯಕ್ರಮ ನಡೀತಿದೆ ಎಂದರು
ಇತ್ತೀಚೆಗೆ ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ SDPI ಬೆಂಬಲದಲ್ಲಿ ಮುಸ್ಲಿಮರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣವೂ ನಡೆದಿತ್ತು.