ಕತ್ತಿಯಿಂದ ಕುತ್ತಿಗೆ ಕಡಿದು ಅತ್ತಿಗೆ ಕೊಂದ ಮೈದುನ | JANATA NEWS
ಹುಬ್ಬಳ್ಳಿ : ಮೈದುನನೇ ಅತ್ತಿಗೆಯನ್ನು ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಡೆದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದ ನಿವಾಸಿ ಸುನಂದಾ ಮೆಣಸಿನಕಾಯಿ (40) ಕೊಲೆಗೀಡಾದ ಮಹಿಳೆ. ಮಂಜುನಾಥ ಕೊಲೆ ಮಾಡಿದ ಆರೋಪಿ.
ಮನೆಯಲ್ಲಿ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಕತ್ತಿಯಿಂದ ಕುತ್ತಿಗೆ ಮೇಲೆ ಹಲ್ಲೆ ಮಾಡಿದ ಪರಿಣಾಮವಾಗಿ ಕತ್ತು ಕತ್ತರಿಸಿ ಹೋಗಿ ಗಂಭೀರ ಗಾಯವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಂದಗೋಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED TOPICS:
English summary :Maiduna killed her sister-in-law by cutting her throat with a sword