ನವವಿವಾಹಿತೆಯನ್ನ 20ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಕೊಲೆಗೈದ ಹಳೆ ಪ್ರೇಮಿ | JANATA NEWS
ಚಿಕ್ಕಬಳ್ಳಾಪುರ : ನವವಿವಾಹಿತೆಯನ್ನ ಹಳೇಯ ಪ್ರೇಯಸಿಗೆ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಕೊಂದಿದ್ದಾನೆ. ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಸೌಮ್ಯ (23) ಮೃತ ದುರ್ದೈವಿಯಾಗಿದ್ದು, ಸುಬ್ರಹ್ಮಣ್ಯ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಪ್ರೇಯಸಿ ಸೌಮ್ಯ ಮತ್ತು ಆರೋಪಿ ಸುಬ್ರಮಣ್ಯ ಬೆಂಗಳೂರಿನ ನಾಗವಾರದ ಕಾಫಿ ಡೇನಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಪಿದ್ದ ಸೌಮ್ಯ ಪ್ರಿಯಕರ ಸುಬ್ರಮಣ್ಯನೊಂದಿಗೆ ಅಂತರ ಕಾಯ್ದುಕೊಂಡಿದ್ದಳು. 15 ದಿನಗಳ ಹಿಂದೆ ಬೇರೆ ಹುಡುಗನ ಜೊತೆ ಮದುವೆಯಾಗಿದ್ದಳು. ಪ್ರೀತಿಸಿದ ಹುಡುಗಿ ಬೇರೊಬ್ಬ ಹುಡುಗನೊಂದಿಗೆ ಮದುವೆಯಾಗಿದ್ದಕ್ಕೆ ಸುಬ್ರಮಣ್ಯ ಕೋಪಗೊಂಡಿದ್ದ.
ಪತಿಯ ಮನೆಯಿಂದ ತವರು ಮನೆಗೆ ಬಂದಿದ್ದ ಪ್ರೇಯಸಿಯ ವಿಚಾರ ಅದು ಹೇಗೋ ಪಾಗಲ್ ಪ್ರೇಮಿಗೆ ತಿಳಿದಿದೆ. ಪ್ರೇಯಸಿಯನ್ನು ಮಾತನಾಡಿಸುವ ಸೋಗಿನಲ್ಲಿ ಬಂದು ಕೊಟ್ಟಿಗೆಯಲ್ಲಿ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.
ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಸೌಮ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ತಾನೂ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪಾಗಲ್ ಪ್ರೇಮಿಯನ್ನು ಬಂಧಿಸಲು ಹೋದ ಪೊಲೀಸರೇ ಆರೋಪಿ ಸುಬ್ರಮಣ್ಯನನ್ನು ದೇವನಹಳ್ಳಿ ಆಕಾಶ್ ಆಸ್ಪತ್ರೆಯ ಸೇರಿಸಿದ್ದು ಆತನಿಗೆ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.