ಸಿಬಿಐ ರೇಡ್: ಗೇಟ್ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ! | JANATA NEWS
ರಾಮನಗರ : ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ದಾಳಿ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು ಗೇಟ್ಗೆ ಬೀಗ ಹಾಕಿ ಮನೆಯಲ್ಲಿ ಕುಳಿತಿದ್ದಾರೆ.
ರಾಮನಗರ, ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ದಾಳಿ ಮಾಡಿದ ಅಧಿಕಾರಿಗಳು ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ಡಿಕೆಶಿಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿರುವ ಮನೆಯ ಗೇಟ್ಗೆ ಬೀಗ ಜಡಿಯಲಾಗಿದೆ. ಗೇಟ್ ಗೆ ಬೀಗ ಹಾಕಿ ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಡಿಕೆಶಿ ತಾಯಿ ಗೌರಮ್ಮ ಕುಳಿತಿದ್ದಾರೆ.
ನನ್ನ ತಾಯಿಗೆ ವಯಸ್ಸಾಗಿದೆ. ಮರೆವು ಜಾಸ್ತಿ ಆಗಿದೆ. ಸಿಬಿಐ ಅಂದಕೂಡಲೇ ನಮ್ಮ ಜನ ಗಡಗಡ ಅಂತಾರೆ. ನಾವು ಗಡಗಡ ಅಂತೀವಿ. ಹೀಗಾಗಿ ಅಲ್ಲಿ ಏನಾಗಿದೆ ಅಂತಾ ಯಾರಿಗೂ ಗೊತ್ತಾಗಿಲ್ಲ ಎಂದು ಡಿಕೆಶಿಯವರು ಹೇಳಿದರು.