ಡಿಕೆ ಶಿವಕುಮಾರ್ ಅವರು ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದು: ಸಿಟಿ ರವಿ ವ್ಯಂಗ್ಯ | JANATA NEWS
ಚಿಕ್ಕಮಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಅವರ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಭಾರತ್ ಜೋಡೋ ಯಾತ್ರೆಯಲ್ಲಿ ಡಿ.ಕೆ ಶಿವಕುಮಾರ ಕಣ್ಣೀರಿಗೆ ಬಿಜೆಪಿ ನಾಯಕ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.
ತುಂಬಾ ಚೆನ್ನಾಗಿ ನಟನೆ ಮಾಡುತ್ತಾರೆ ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ . ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ . ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.
ನಟನೆ ಡಿ.ಕೆ ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ. ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ. ಆದರೆ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ ಪ್ರಯತ್ನಪಟ್ಟರೆ ಪೋಷಕ ಪಾತ್ರಗಳು ಸಿಗುತ್ತದೆ. ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿ.ಕೆ. ಶಿವಕುಮಾರ ನಟನೆ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಅವರ ಪಾಲಿಗೆ. ಲೇಟಾಗಿದೆ, ಆದರೆ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿಕೆ ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದು ಸಿಟಿ ರವಿ ವ್ಯಂಗ್ಯವಾಡಿದರು.