ಭಾರತ್ ಜೋಡೋ ಯಾತ್ರೆಗೆ ನಾಳೆ ಮೈಸೂರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮನ | JANATA NEWS
ಮೈಸೂರು : ಭಾರತ್ ಜೋಡೋ ಯಾತ್ರೆಗೆ ಮಗನಿಗೆ ಸಾಥ್ ನೀಡಲು ಕಾಂಗ್ರೆಸ್ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರಾ ಹಿನ್ನೆಲೆ ಅ.3 ರಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್ಗೆ ಮತ್ತಷ್ಟು ಹುರುಪು ಸಿಕ್ಕಂತಾಗಿದೆ.
ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ.
ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.
ಭಾರತ್ ಜೋಡೋ ಪಾದಯಾತ್ರೆಗೆ ಅ.4 ಮತ್ತು 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.