ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು, ಇಬ್ಬರು ಸ್ಥಳದಲ್ಲೇ ಸಾವು | JANATA NEWS
ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮರೆವಾಡ ಗ್ರಾಮದ ಬಳಿ ನಡೆದಿದೆ.
ಯಶವಂತ ಯಲಿಗಾರ (26), ಅಕ್ಷಯ ಕಡಕೋಳ (26) ಮೃತ ದುರ್ದೈವಿಗಳು. ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ ಯಶವಂತ ಸೋಮಶೇಖರ ಯಲಿಗಾರ ಹಾಗೂ ಜೊತೆಗಿದ್ದ ಅಕ್ಷಯ ಕಡಕೋಳ ಸಾವಿಗೀಡಾಗಿದ್ದಾರೆ.
ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
English summary :The driver lost control and the car hit the bridge, killing two people on the spot