ಗುಂಡು ಹಾರಿಸಿಕೊಂಡು ಕರ್ತವ್ಯನಿರತ ಪಿಎಸ್ಐ ಆತ್ಮಹತ್ಯೆ ಯತ್ನ | JANATA NEWS
ಮಂಗಳೂರು : ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್ಎಂಪಿಎ ದ ಪ್ರಮುಖ ದ್ವಾರದ ಗೇಟ್ ಬಳಿ ನಡೆದಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್ ಪರ್ಮರ್ (33) ನವ ಮಂಗಳೂರು ಬಂದರು ಪ್ರಾಧಿಕಾರದ ಗೇಟ್ನಲ್ಲಿ ಕರ್ತವ್ಯನಿರತರಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಎನ್ಎಂಪಿಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಐಎಸ್ಎಫ್ ನ ಪಿಎಸ್ಐ ಜ್ಯೋತಿ ಬಾಯಿ ಎಂಬುವರು ಇಂದು ಬೆಳಗ್ಗೆ 6 ಗಂಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರ ಪತಿ ಓಂಬೀರ್ ಸಿಂಗ್ ಎಂಆರ್ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದಾರೆ. ಇವರು ರಾಜಸ್ಥಾನದ ಭಾರತ್ ಪುರ್ ಜಿಲ್ಲೆಯವರು.
ಘಟನೆಗೆ ಕೌಟುಂಬಿಕ ಕಲಹ ಕಾರಣವೆಂದು ಹೇಳಲಾಗುತ್ತಿದೆ. ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.