Tue,Aug04,2026
ಕನ್ನಡ / English

ಮರ್ಯಾದಾ ಹತ್ಯೆ: ಪ್ರೇಮಿಗಳನ್ನ ಒಂದು ಮಾಡ್ತೀವಿ ಎಂದು ಕರೆದು ಹತ್ಯೆ | JANATA NEWS

18 Oct 2022

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ. ಯುವತಿಯ ತಂದೆ ಹಾಗೂ ಮಾವಂದಿರು ಪ್ರೇಮಿಗಳಿಬ್ಬರನ್ನು ಕೊಲೆಗೈದು ಕೃಷ್ಣಾ ನದಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಇಬ್ಬರ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗ್ರಾಮದ ವಿಶ್ವನಾಥ್ ನೆಲಗಿ(24) ಹಾಗೂ ರಾಜೇಶ್ವರಿ(18) ಹತ್ಯೆಯಾದ ಪ್ರೇಮಿಗಳು. ಸುಮಾರು 4-5 ವರ್ಷಗಳಿಂದ ವಿಶ್ವನಾಥ್ ಹಾಗೂ ರಾಜೇಶ್ವರಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

ಈ ವಿಚಾರ ತಿಳಿದ ರಾಜೇಶ್ವರಿ ಪೋಷಕರು, ಅಪ್ರಾಪ್ತ ಮಗಳ ಪ್ರೀತಿಗೆ ಅಡ್ಡಿಪಡಿಸಿ ಬುದ್ಧಿ ಮಾತು ಹೇಳಿದ್ದರು. ವಿಶ್ವನಾಥ್‌ನ ಮನೆಯವರು ಆತನನ್ನು ಕೂಲಿ ಕೆಲಸಕ್ಕೆಂದು ಕೇರಳದ ಕಾಸರಗೋಡಿಗೆ ಕಳುಹಿಸಿದ್ದರು.

ಆದರೆ ರಾಜೇಶ್ವರಿಯ ತಂದೆ ಪರಸಪ್ಪ ಕರಡಿ ಇಬ್ಬರನ್ನೂ ಒಂದು ಮಾಡಿಸುವುದಾಗಿ ನಂಬಿಸಿ, ವಿಶ್ವನಾಥ್‌ನನ್ನು ಊರಿಗೆ ಬರುವಂತೆ ಹೇಳಿದ್ದಾರೆ. ನರಗುಂದ ಬಳಿ ಇದ್ದ ವಿಶ್ವನಾಥನನ್ನು ನಂಬಿಸಿ ರಾಜೇಶ್ವರಿ, ನಿನ್ನನ್ನು ಒಂದು ಮಾಡೋದಾಗಿ ಬೇವಿನಮಟ್ಟಿ ಗ್ರಾಮದಿಂದ ಕರೆದೊಯ್ದಿದ್ದರಂತೆ. ಇತ್ತ ಬಾಲಕಿಯನ್ನು ಕರೆತಂದಿದ್ದ ಆರೋಪಿಗಳು ರಾಜೇಶ್ವರಿ ಕತ್ತನ್ನು ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದರಂತೆ. ಇತ್ತ ವಿಶ್ವನಾಥನ ಮರ್ಮಾಂಗ ಹಾಗೂ ಎದೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದರಂತೆ.

ಅಲ್ಲಿಂದ ಇಬ್ಬರ ಮೃತ ದೇಹಗಳನ್ನು ಕ್ರೂಸರ್ ವಾಹನದಲ್ಲಿ ಕೊಂಡೊಯ್ದಿದ್ದಾರೆ. ಶವಗಳನ್ನು ಹುನಗುಂದ ಎನ್‌ಹೆಚ್ 50ಯ ಕೃಷ್ಣಾ ನದಿ ಬ್ರಿಡ್ಜ್ ಮೇಲೆ ಕೊಂಡೊಯ್ದು, ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಶವಗಳ ಮೇಲಿನ ಬಟ್ಟೆ ಬಿಚ್ಚಿ, ಹರಿಯುತ್ತಿದ್ದ ಕೃಷ್ಣಾ ನದಿಗೆ ಎಸೆದಿದ್ದಾರೆ. ನಂತರ ಅವರಿಬ್ಬರ ಬಟ್ಟೆಗಳನ್ನು ಸಂಗಮ ಕ್ರಾಸ್ ಬಳಿ ತಂದು ಸುಟ್ಟು ಹಾಕಿದ್ದಾರೆ.

ವಿಚಾರಣೆಗೆ ಸಂದರ್ಭದಲ್ಲಿ ಅನುಮಾನಗೊಂಡ ಪೊಲೀಸರು, ಶಂಕೆಯ ಮೇರೆಗೆ ಅಕ್ಟೋಬರ್ 15 ರಂದು ಯುವತಿಯ ಸಹೋದರ ರವಿ ಹುಲ್ಲಣ್ಣವರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.

ಯುವತಿ ತಂದೆ ಪರಸಪ್ಪ ಕರಡಿ ಕುಮ್ಮಕ್ಕಿನಿಂದಲೇ ಕೊಲೆ ಮಾಡಿದ್ದಾಗಿ ಹೇಳಿದ್ದಾನೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು, ರಾಜೇಶ್ವರಿ ಕರಡಿ (17) ವಿಶ್ವನಾಥ ನೆಲಗಿ (22) ಕೊಲೆಯಾದ ಪ್ರೇಮಿಗಳು. ಪ್ರಕರಣದಲ್ಲಿ ರಾಜೇಶ್ವರಿ ಅಣ್ಣ ರವಿ ಹುಲ್ಲಣ್ಣವರ (19), ಮಾವಂದಿರರಾದ ಹನುಮಂತ ಮಲ್ನಾಡದ (22), ಬೀರಪ್ಪ ದಳವಾಯಿ (18) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Honor killing: Killing of lovers by calling them

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...