ಸ್ಥಳ ಪರಿಶೀಲನೆ ವೇಳೆ ಹಲ್ಲೆ ನಡೆಸಲು ಮುಂದಾದ ಆರೋಪಿಯ ಕಾಲಿಗೆ ಗುಂಡೇಟು | JANATA NEWS
ಶಿವಮೊಗ್ಗ : ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಶಿವಮೊಗ್ಗದ ವೆಂಕಟೇಶ್ ನಗರದಲ್ಲಿ ಪೊಲಿಸರ ಶೂಟ್ಔಟ್ ನಡೆದಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಆರೋಪಿಗಳನ್ನು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ.
ಆರೋಪಿಗಳು ಕೊಲೆ ಮಾಡಿದ ನಂತರ ಚಾಕುವನ್ನು ಸಾಗರ ರಸ್ತೆಯ ಹರ್ಷ ದಿ ಫೆರ್ನ್ ಹೋಟೆಲ್ ಹಿಂಭಾಗದ ಚಾನೆಲ್ ಬಳಿ ಎಸೆದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದರು.
ಇದರಲ್ಲಿ ಎ1 ಆರೋಪಿ ಆಗಿರುವ ಜಬೀಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಆರೋಪಿ ಜಬೀ ಪೊಲೀಸ್ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ತಮ್ಮ ಸಿಬ್ಬಂದಿಯ ರಕ್ಷಣೆಗಾಗಿ ಇನ್ ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ
ಘಟನೆಯಲ್ಲಿ ಪೊಲೀಸ್ ಪೇದೆ ರೋಷನ್ ಅವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ಬಿದ್ದಿರುವ ಆರೋಪಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.