ಬಾಲಕ ಭಗತ್ ಸಿಂಗ್ ಪಾತ್ರದ ಅಭ್ಯಾಸದ ವೇಳೆ ಉರುಳಿಗೆ ಸಿಲುಕಿ ಸಾವು! | JANATA NEWS
ಚಿತ್ರದುರ್ಗ : ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸುವ ಸಲುವಾಗಿ ರಿಹರ್ಸಲ್ ಮಾಡುತ್ತಿದ್ದ ಬಾಲಕನೊಬ್ಬ ನಿಜವಾಗಿಯೂ ಉರುಳಿಗೆ ಬಲಿಯಾದ ದುರಂತವೊಂದು ಚಿತ್ರದುರ್ಗದಲ್ಲಿ ಈ ದುರ್ಘಟನೆ ನಡೆದಿದೆ.
12 ವರ್ಷದ ಬಾಲಕ ಸಂಜಯ್ ಗೌಡ ಮೃತ ದುರ್ದೈವಿಯಾಗಿದ್ದು, ನಗರದ ಎಸ್ಎಲ್ವಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ಸಿದ್ಧತೆ ನಡೆಸಿದ್ದ ವೇಳೆ ದುರ್ಘಟನೆ ನಡೆದಿದೆ. ಶಾಲೆಯಲ್ಲಿ ತರಬೇತಿ ಬಳಿಕ ಮನೆಗೆ ಬಂದಿರೋ ಬಾಲಕ ಮನೆಯಲ್ಲೂ ಪ್ರಾಕ್ಟೀಸ್ ಮಾಡಲು ಮುಂದಾಗಿದ್ದಾನೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ರಿಹರ್ಸಲ್ ಮಾಡಲು ಮುಂದಾದ ಈತ ಫ್ಯಾನಿಗೆ ಹಗ್ಗ ಬಿಗಿದುಕೊಂಡು ಮಂಚದ ಮೇಲೆ ನಿಂತಿದ್ದ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಜಿಗಿದಿದ್ದಾನೆ. ಹೀಗಾಗಿ ಈತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಕುಟುಂಬಸ್ಥರು ಮನೆಗೆ ವಾಪಸ್ ಆಗಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಪ್ರಕರಣದ ಕುರಿತು ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.