ಬೈಕ್ಗೆ ಗುದ್ದಿದ ಲಾರಿ: ದಂಪತಿ ಸಾವು, ಮಕ್ಕಳಿಬ್ಬರಿಗೆ ಗಾಯ | JANATA NEWS
ಮಂಗಳೂರು : ಸ್ಕೂಟರ್ಗೆ ಲಾರಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಹೊರವಲಯದ ಕಲ್ಲಾಪು ಬಳಿ ನಡೆದಿದೆ.
ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್ (4 5) ಹಾಗೂ ಕೊಣಾಜೆ ಪಜೀರು ನಿವಾಸಿ ನೇತ್ರಾವತಿ(48) ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಸಂಭವಿಸಿದೆ.
ಸ್ಕೂಟರಿನಲ್ಲಿದ್ದ ಮೃತ ನೇತ್ರಾವತಿ ಅವರ ಮಗಳು ಮೋಕ್ಷಾ(4), ಹಾಗೂ ಅಕ್ಕನ ಮಗ ಜ್ಞಾನೇಶ್ ಗಂಭೀರ ಗಾಯಗೊಂಡಿದ್ದಾರೆ.
ಗಂಗಾಧರ ಅವರು ನೇತ್ರಾವತಿ ಮತ್ತು ಇಬ್ಬರು ಮಕ್ಕಳನ್ನು ಸ್ಕೂಟರ್ನಲ್ಲಿ ಕರೆದುಕೊಂಡು ಪಂಪ್ವೆಲ್ನಿಂದ ತೊಕ್ಕೊಟ್ಟು ಕಡೆಗೆ ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಎದುರು ಕಲ್ಲಾಪು ಮಾರ್ಕೆಟ್ನಿಂದ ಬಂದ ಲಾರಿ ಗುದ್ದಿದೆ. ಸ್ಕೂಟರ್ನಲ್ಲಿದ್ದ ನಾಲ್ವರೂ ರಸ್ತೆಗೆ ಬಿದ್ದಿದ್ದಾರೆ. ಗಂಗಾಧರ್ ಹಾಗೂ ನೇತ್ರಾವತಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಲಾರಿ ಚಾಲಕ ಹನೀಫ್ನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.