ನರ್ಸಿಂಗ್ ಕಾಲೇಜಿನಲ್ಲಿ 10 ಸಾವಿರ ಕೊಟ್ಟರೆ ಪರೀಕ್ಷೆಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ, ಸಾಮೂಹಿಕ ನಕಲು | JANATA NEWS
ದಾವಣಗೆರೆ : ನರ್ಸಿಂಗ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ನಕಲು ಮಾಡುತ್ತಿದ್ದು ಇದಕ್ಕೆ ಕಾಲೇಜು ಸಿಬ್ಬಂದಿಗಳೇ ಸಾಥ್ ನೀಡಿದ ಘಟನೆ ದಾವಣಗೆರೆ ಆಂಜನೇಯ ಬಡಾವಣೆಯಲ್ಲಿರುವ ಸಂಜೀವಿನಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ನರ್ಸಿಂಗ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ನಕಲು ಮಾಡುತ್ತಿದ್ದ ವೇಳೆ ಏಕಾಏಕಿ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ಕಾಲೇಜಿಗೆ ದಾಳಿ ನಡೆಸಿದ ಘಟನೆ ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಸಂಜೀವಿನಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ.
ವರದಿಗಳ ಪ್ರಕಾರ ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡಲು ಪ್ರತಿಯೊಬ್ಬರಿಂದ 10 ಸಾವಿರ ರೂ. ಹಣ ವಸೂಲಿ ಮಾಡಲಾಗಿದೆ ಎನ್ನಲಾಗಿದೆ. ಹಣ ನೀಡಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಿ ಅವರಿಗೆ ಮಾತ್ರ ಉತ್ತರ ಹೇಳಿಕೊಡುತ್ತಿದ್ದರು ಎನ್ನಲಾಗಿದೆ.