Tue,Aug04,2026
ಕನ್ನಡ / English

ರಾಜ್ಯದಲ್ಲಿ ಪಕ್ಷ ಕಟ್ಟಿದ ಪ್ರಮುಖರಲ್ಲಿ ನಾನು ಒಬ್ಬ, ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ: ಬಿಎಸ್​ವೈ | JANATA NEWS

15 Dec 2022

ಕೊಪ್ಪಳ : ಬಿಜೆಪಿ ಪಕ್ಷ ಹಗಲು ರಾತ್ರಿ ಕಟ್ಟಿ ಬೆಳೆಸಿದವೆಲ್ಲಿ ನಾನೂ ಒಬ್ಬ, ನನ್ನನ್ನು ಯಾರೂ ಕಡೆಗಣಿಸಿಲ್ಲ. ಹೀಗಾಗಿ ಪಕ್ಷದಲ್ಲಿ ನನ್ನನ್ನು ಕಡೆಗಣಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

ಯಡಿಯೂರಪ್ಪ ಅವರನ್ನ ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ಮಾತನಾಡಿದ ಅವರು, ನನಗೆ ನನ್ನದೇ ಆದ ಶಕ್ತಿ ಇದೆ, ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ.

ಇಲ್ಲಿ ಯಾರೂ ಯಾರನ್ನೂ ಮುಗಿಸಲು ಆಗಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮ ಪಕ್ಷವನ್ನ ನೋಡಿಕೊಳ್ಳಲಿ. ನಮ್ಮ ಬಗ್ಗೆ ಅವರಿಗೇಕೆ ಚಿಂತೆ. ನಮ್ಮ ಪಕ್ಷದಲ್ಲಿ ಎಲ್ಲವೂ ಸರಿಯಿದೆ. ರಾಜ್ಯ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ, ಯಾವುದೇ ಗೊಂದಲಗಳಿಲ್ಲ. ನಾನು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.

ನನ್ನನ್ನು ಈ ಸಮಾವೇಶಕ್ಕೆ ಆಹ್ವಾನ ನೀಡಿಲ್ಲ ಎನ್ನುವಂತಹ ಮಾತಲ್ಲ‌. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆಗಮಿಸುವ ಹಿನ್ನೆಲೆಯಲ್ಲಿ ನಾನು ಎಲ್ಲ ಕಾರ್ಯಕ್ರಮ ರದ್ದು ಪಡಿಸಿ ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿರುವೆ. ಇಲ್ಲಿ ನನ್ನ ಯಾರೂ ಕಡೆಗಣನೆ ಮಾಡಿಲ್ಲ ಎಂದರು.

ಕೊಪ್ಪಳಕ್ಕೆ ಬಿಜೆಪಿ ರಾಷ್ತ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆಗಮಿಸುತ್ತಿದ್ದಾರೆ. ಹಾಗಾಗಿ ನಾನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಜೆ ಪಿ ನಡ್ಡಾ ನೇತೃತ್ವದಲ್ಲಿ ಮತ್ತೊಮ್ಮೆ ಕರ್ನಾಟಕದಲ್ಲಿ 150 ಹೆಚ್ಚು ಬಿಜೆಪಿ ಸ್ಥಾನಗಳ ಗೆಲ್ಲಲಿದ್ದು, ಮತ್ತೆ ಸರ್ಕಾರ ರಚನೆ ಮಾಡುವುದು ನಿಶ್ಚಿತ ಎಂದರು.

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವುದೊಂದಿಗೆ ನನ್ನ ಆಸೆಯಾಗಿದೆ. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕು ಎನ್ನುವುದು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ, ಅದು ಅವರ ಪಕ್ಷದ ವಿಚಾರ ಎಂದರು.

ಇದೇ ವೇಳೆ ಜನಾರ್ದನ್ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ.. ಜನಾರ್ದನ್ ರೆಡ್ಡಿ ನನಗೆ ಸಿಕ್ಕಿದ್ರು ಮಾತನಾಡಿದ್ದೇನೆ. ನಾವೆಲ್ಲ ಮುಖಂಡರು ಮಾತನಾಡಿದ್ದೇವೆ. ರೆಡ್ಡಿ ಬಿಜೆಪಿಯಲ್ಲಿ ಇರ್ತಾರೆ, ನಮ್ಮ ಜೊತಯಲ್ಲೇ ಇರ್ತಾರೆ. , ಅವರು ಮನೆ ಮಾಡಿರೋದಕ್ಕೆ ಗೊಂದಲ ಉಂಟಾಗಿದೆ. ಅವರು ಎಲ್ಲಿ ಸ್ಪರ್ಧೆ ಮಾಡಬೇಕು ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

RELATED TOPICS:
English summary :I am one of the leaders who built the party in the state, there is no question of ignoring me: BSY

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ಸಚಿವರ ಸೇರ್ಪಡೆಗೆ ಅನುಮೋದನೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ಸಚಿವರ ಸೇರ್ಪಡೆಗೆ ಅನುಮೋದನೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ನ್ಯೂಸ್ MORE NEWS...