Thu,May02,2024
ಕನ್ನಡ / English

ದೇಹವನ್ನು ಅಗ್ನಿಗೆ ಅರ್ಪಿಸಿ, ಸ್ಮಾರಕ ಕಟ್ಟಬೇಡಿ: ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲಿ ಏನಿದೆ? | JANATA NEWS

03 Jan 2023
2203

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ನಾಡಿನ ಪ್ರಸಿದ್ಧ ಪ್ರವಚನಕಾರ, ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ಸಿದ್ದೇಶ್ವರ ಶ್ರೀಗಳು ರಚಿಸಿದ್ದ ಅಂತಿಮ ಅಭಿವಂದನ ಪತ್ರ ಇಲ್ಲಿದೆ.

ಮುಖ್ಯವಾಗಿ ನನ್ನ ಯಾವುದೇ ಬಗೆಯ ಸ್ಮಾರಕ ನಿರ್ಮಾಣ ಮಾಡಬಾರದೆಂದು 2014ರಲ್ಲೇ ವಿಲ್ ಬರೆದಿದ್ದರು. ಈ ಪತ್ರಕ್ಕೆ ನ್ಯಾಯಾಧೀಶರು ಸಹಿ ಹಾಕಿದ್ದಾರೆ. ನಿನ್ನೆ ವೈಕುಂಠ ಏಕಾದಶಿ ದಿನವಾಗಿದ್ದು ಸ್ವರ್ಗದ ಎಲ್ಲ ಬಾಗಿಲುಗಳು ತೆರೆದಿರುತ್ತವೆ ಎಂದು ಹಿಂದೂ ಪೌರಾಣಿಕ ನಂಬಿಕೆ. ಸಿದ್ದೇಶ್ವರ ಶ್ರೀಗಳು ಇಂಥ ವಿಶೇಷ ದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಇವರು ಅಂತಿಮ ಅಭಿವಂದನ ಪತ್ರದ ಸಾಲುಗಳು ಹೀಗಿವೆ..

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು.

ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತಿದೆ. ದೀಪ ಆರಿದಂತೆ. ತೆರೆ ಅಡಗಿದಂತೆ. ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರಡು ಆಶಯಗಳು -
ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು.

ಅಂತಿಮ ನೆನಹು; "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ. ಸಹಜವೂ ಇಲ್ಲ, ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ, ಇಲ್ಲ ಎಂಬುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು". ಅಂತ್ಯಃ ಪ್ರಣಾಮಾಂಜಲಿಃ! ಎಂದು ಅಭಿವಂದನಾ ಪತ್ರವನ್ನು ಶ್ರೀಗಳು ಬರೆದಿದ್ದಾರೆ.

RELATED TOPICS:
English summary :Offer the body to fire, do not build a monument: What is in Siddeshwar Sri final eulogy?

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...