Sat,Mar21,2026
ಕನ್ನಡ / English

ದೇಹವನ್ನು ಅಗ್ನಿಗೆ ಅರ್ಪಿಸಿ, ಸ್ಮಾರಕ ಕಟ್ಟಬೇಡಿ: ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿನಂದನಾ ಪತ್ರದಲ್ಲಿ ಏನಿದೆ? | JANATA NEWS

03 Jan 2023

ವಿಜಯಪುರ : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ವಯೋಸಹಜ ಅನಾರೋಗ್ಯದ ಕಾರಣದಿಂದ ನಿನ್ನೆ ಸಂಜೆ ದೈವಾಧೀನರಾಗಿದ್ದಾರೆ.

ನಾಡಿನ ಪ್ರಸಿದ್ಧ ಪ್ರವಚನಕಾರ, ಭಕ್ತರ ಮನದಲ್ಲಿ ನಡೆದಾಡುವ ದೇವರೆಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ಸಿದ್ದೇಶ್ವರ ಶ್ರೀಗಳು ರಚಿಸಿದ್ದ ಅಂತಿಮ ಅಭಿವಂದನ ಪತ್ರ ಇಲ್ಲಿದೆ.

ಮುಖ್ಯವಾಗಿ ನನ್ನ ಯಾವುದೇ ಬಗೆಯ ಸ್ಮಾರಕ ನಿರ್ಮಾಣ ಮಾಡಬಾರದೆಂದು 2014ರಲ್ಲೇ ವಿಲ್ ಬರೆದಿದ್ದರು. ಈ ಪತ್ರಕ್ಕೆ ನ್ಯಾಯಾಧೀಶರು ಸಹಿ ಹಾಕಿದ್ದಾರೆ. ನಿನ್ನೆ ವೈಕುಂಠ ಏಕಾದಶಿ ದಿನವಾಗಿದ್ದು ಸ್ವರ್ಗದ ಎಲ್ಲ ಬಾಗಿಲುಗಳು ತೆರೆದಿರುತ್ತವೆ ಎಂದು ಹಿಂದೂ ಪೌರಾಣಿಕ ನಂಬಿಕೆ. ಸಿದ್ದೇಶ್ವರ ಶ್ರೀಗಳು ಇಂಥ ವಿಶೇಷ ದಿನದಂದೇ ಇಹಲೋಕ ತ್ಯಜಿಸಿದ್ದಾರೆ. ಇವರು ಅಂತಿಮ ಅಭಿವಂದನ ಪತ್ರದ ಸಾಲುಗಳು ಹೀಗಿವೆ..

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ, ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ. ಅದನ್ನು ಸುಭಗ ಹಾಗೂ ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೇ ಧರ್ಮ. ಅದು ಸ್ವ-ಪರ ನೆಮ್ಮದಿಗೆ ಕಾರಣ. ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ಗುರುದೇವರು.

ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹ- ಹೃದಯರು, ಸಾಧಕರು ಹಾಗೂ ಶ್ರೀ ಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನ್ನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿ ಬೆಳಗ ಹರಡಿವೆ. ಜಾಗತಿಕ ತತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಠಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ ಎಲ್ಲದಕ್ಕೂ ಉಪಕೃತ. ಬದುಕು ಮುಗಿಯುತ್ತಿದೆ. ದೀಪ ಆರಿದಂತೆ. ತೆರೆ ಅಡಗಿದಂತೆ. ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾಮೌನ, ಶೂನ್ಯ ಸತ್ಯ. ಹಲವು ದಶಕಗಳ ಕಾಲ ಈ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನು ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರಡು ಆಶಯಗಳು -
ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯರ್ಪಿತ ಮಾಡುವುದು. ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ. ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು. ಯಾವುದೇ ಬಗೆಯ ಸ್ಮಾರಕ ನಿರ್ಮಿಸಲಾಗದು.

ಅಂತಿಮ ನೆನಹು; "ಸತ್ಯವೂ ಇಲ್ಲ, ಅಸತ್ಯವೂ ಇಲ್ಲ. ಸಹಜವೂ ಇಲ್ಲ, ಅಸಹಜವೂ ಇಲ್ಲ. ನಾನೂ ಇಲ್ಲ, ನೀನೂ ಇಲ್ಲ. ಇಲ್ಲ, ಇಲ್ಲ ಎಂಬುದು ತಾನಿಲ್ಲ. ಗುಹೇಶ್ವರನೆಂಬುದು ತಾ ಬಯಲು". ಅಂತ್ಯಃ ಪ್ರಣಾಮಾಂಜಲಿಃ! ಎಂದು ಅಭಿವಂದನಾ ಪತ್ರವನ್ನು ಶ್ರೀಗಳು ಬರೆದಿದ್ದಾರೆ.

RELATED TOPICS:
English summary :Offer the body to fire, do not build a monument: What is in Siddeshwar Sri final eulogy?

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...