ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವು | JANATA NEWS
ಬಾಗಲಕೋಟೆ : ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಮುಧೋಳ ತಾಲೂಕಿನ ಕುಳಲಿ ಬಳಿ ನಡೆದಿದೆ.
ಯುವಕರಾದ ಸದಾಶಿವ ಬೆಳಗಲಿ(18), ಗೋವಿಂದ(20), ಹನುಮಂತ(22) ಮೃತ ದುರ್ದೈವಿಗಳು. ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಾಕರಿಯಾಗದೆ, ಸದಾಶಿವ ಸಾವನ್ನಪ್ಪಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
English summary :Three killed in tractor overturn