Wed,Aug05,2026
ಕನ್ನಡ / English

ನಾನು ಹಿಂದು, ನಮ್ಮಪ್ಪ-ಅವ್ವನೂ ಹಿಂದು, ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? | JANATA NEWS

11 Feb 2023

ವಿಜಯಪುರ : ನಾನು ಹಿಂದೂ, ನಮ್ಮಪ್ಪ - ಅವ್ವನೂ ಹಿಂದೂ. ನಾನು ಹಿಂದೂ ಅಲ್ಲವಾ, ನಮ್ಮವ್ವ - ನಮ್ಮಪ್ಪ ಹಿಂದುಗಳಲ್ಲವಾ? ಸಿಟಿ ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಮನಾಗಿ ಬಿಡುತ್ತೇನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಶನಿವಾರ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ಮಾತನಾಡಿ, ನಾನು ಹಿಂದು, ನಮ್ಮವ್ವ-ನಮ್ಮಪ್ಪ ಹಿಂದು. ನನ್ನ ಹೆಸರು ಸಿದ್ದರಾಮಯ್ಯ ಎಂದಿರಿಸಿಲ್ಲವೇ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಪ್ರಶ್ನಿಸಿದರು.

ಮುಂದುವರಿದು ಹಿಂದು ಹಾಗೂ ಹಿಂದುತ್ವ ಎಂಬ ಪದದ ಬಗ್ಗೆ ನಿಮಗೆ ಗೊತ್ತಾ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು. ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ ಎಂದರು.

ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ. ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೇವು. ಎಲ್ಲವೂ ಮುಸ್ಲಿಮರಿಗೆ ಕೊಟ್ಟಿದ್ದೇವಾ? ಕೇವಲ ಶೇ.5ರಷ್ಟು ಮಾತ್ರ ಮುಸ್ಲಿಮರಿಗೆ ಕೊಟ್ಟಿತ್ತು. ಶೇ.95ರಷ್ಟನ್ನು ಹಿಂದೂಗಳಿಗೆ ಕೊಡಲಾಗಿತ್ತು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಬಿಜೆಪಿಯವರಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ 2017ರಲ್ಲಿ ಹೇಳಿದ್ದರು. ಆದರೆ, ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

ತಮ್ಮ ಸುಳ್ಳು ಮುಚ್ಚಿಕೊಳ್ಳಲು ಬಿಜೆಪಿ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಿದೆ. ಲಂಬಾಣಿ ಜನರಿಗೆ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ಕಾನೂನು ಮಾಡಿದ್ದು ನಾವು. ಇಲ್ಲಿ ಹಕ್ಕು ಪತ್ರ ಕೊಡಲು ಬಂದು ಯೋಜನೆ ನಮ್ಮದೆಂದರೆ? ಅಡುಗೆ ಮಾಡಿದ್ದು ನಾವು ಬಡಿಸಿಬಿಟ್ಟು ನಮ್ಮದೆಂದಂತಿದೆ ಎಂದರು.

ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಏಳು ಕೆಜಿಯಿಂದ 5 ಕೆಜಿಗೆ ಇಳಿಸಿದ್ದು ಸುಳ್ಳಾ? ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್‌ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಅಕ್ಕಿಯನ್ನು ಏಕೆ ಕೊಡುತ್ತಿಲ್ಲ? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

RELATED TOPICS:
English summary :I am a Hindu, our father is also a Hindu, C.T. Do I quit being a Muslim just because Ravi says it?

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...