Sat,Jun20,2026
ಕನ್ನಡ / English

ನಾನು ಹಿಂದು, ನಮ್ಮಪ್ಪ-ಅವ್ವನೂ ಹಿಂದು, ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? | JANATA NEWS

11 Feb 2023

ವಿಜಯಪುರ : ನಾನು ಹಿಂದೂ, ನಮ್ಮಪ್ಪ - ಅವ್ವನೂ ಹಿಂದೂ. ನಾನು ಹಿಂದೂ ಅಲ್ಲವಾ, ನಮ್ಮವ್ವ - ನಮ್ಮಪ್ಪ ಹಿಂದುಗಳಲ್ಲವಾ? ಸಿಟಿ ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಮನಾಗಿ ಬಿಡುತ್ತೇನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಶನಿವಾರ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ಮಾತನಾಡಿ, ನಾನು ಹಿಂದು, ನಮ್ಮವ್ವ-ನಮ್ಮಪ್ಪ ಹಿಂದು. ನನ್ನ ಹೆಸರು ಸಿದ್ದರಾಮಯ್ಯ ಎಂದಿರಿಸಿಲ್ಲವೇ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಪ್ರಶ್ನಿಸಿದರು.

ಮುಂದುವರಿದು ಹಿಂದು ಹಾಗೂ ಹಿಂದುತ್ವ ಎಂಬ ಪದದ ಬಗ್ಗೆ ನಿಮಗೆ ಗೊತ್ತಾ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು. ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ ಎಂದರು.

ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ. ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೇವು. ಎಲ್ಲವೂ ಮುಸ್ಲಿಮರಿಗೆ ಕೊಟ್ಟಿದ್ದೇವಾ? ಕೇವಲ ಶೇ.5ರಷ್ಟು ಮಾತ್ರ ಮುಸ್ಲಿಮರಿಗೆ ಕೊಟ್ಟಿತ್ತು. ಶೇ.95ರಷ್ಟನ್ನು ಹಿಂದೂಗಳಿಗೆ ಕೊಡಲಾಗಿತ್ತು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಬಿಜೆಪಿಯವರಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ 2017ರಲ್ಲಿ ಹೇಳಿದ್ದರು. ಆದರೆ, ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

ತಮ್ಮ ಸುಳ್ಳು ಮುಚ್ಚಿಕೊಳ್ಳಲು ಬಿಜೆಪಿ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಿದೆ. ಲಂಬಾಣಿ ಜನರಿಗೆ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ಕಾನೂನು ಮಾಡಿದ್ದು ನಾವು. ಇಲ್ಲಿ ಹಕ್ಕು ಪತ್ರ ಕೊಡಲು ಬಂದು ಯೋಜನೆ ನಮ್ಮದೆಂದರೆ? ಅಡುಗೆ ಮಾಡಿದ್ದು ನಾವು ಬಡಿಸಿಬಿಟ್ಟು ನಮ್ಮದೆಂದಂತಿದೆ ಎಂದರು.

ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಏಳು ಕೆಜಿಯಿಂದ 5 ಕೆಜಿಗೆ ಇಳಿಸಿದ್ದು ಸುಳ್ಳಾ? ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್‌ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಅಕ್ಕಿಯನ್ನು ಏಕೆ ಕೊಡುತ್ತಿಲ್ಲ? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

RELATED TOPICS:
English summary :I am a Hindu, our father is also a Hindu, C.T. Do I quit being a Muslim just because Ravi says it?

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...