Sat,Mar21,2026
ಕನ್ನಡ / English

ನಾನು ಹಿಂದು, ನಮ್ಮಪ್ಪ-ಅವ್ವನೂ ಹಿಂದು, ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? | JANATA NEWS

11 Feb 2023

ವಿಜಯಪುರ : ನಾನು ಹಿಂದೂ, ನಮ್ಮಪ್ಪ - ಅವ್ವನೂ ಹಿಂದೂ. ನಾನು ಹಿಂದೂ ಅಲ್ಲವಾ, ನಮ್ಮವ್ವ - ನಮ್ಮಪ್ಪ ಹಿಂದುಗಳಲ್ಲವಾ? ಸಿಟಿ ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಮನಾಗಿ ಬಿಡುತ್ತೇನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಶನಿವಾರ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ಮಾತನಾಡಿ, ನಾನು ಹಿಂದು, ನಮ್ಮವ್ವ-ನಮ್ಮಪ್ಪ ಹಿಂದು. ನನ್ನ ಹೆಸರು ಸಿದ್ದರಾಮಯ್ಯ ಎಂದಿರಿಸಿಲ್ಲವೇ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಪ್ರಶ್ನಿಸಿದರು.

ಮುಂದುವರಿದು ಹಿಂದು ಹಾಗೂ ಹಿಂದುತ್ವ ಎಂಬ ಪದದ ಬಗ್ಗೆ ನಿಮಗೆ ಗೊತ್ತಾ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು. ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ ಎಂದರು.

ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ. ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೇವು. ಎಲ್ಲವೂ ಮುಸ್ಲಿಮರಿಗೆ ಕೊಟ್ಟಿದ್ದೇವಾ? ಕೇವಲ ಶೇ.5ರಷ್ಟು ಮಾತ್ರ ಮುಸ್ಲಿಮರಿಗೆ ಕೊಟ್ಟಿತ್ತು. ಶೇ.95ರಷ್ಟನ್ನು ಹಿಂದೂಗಳಿಗೆ ಕೊಡಲಾಗಿತ್ತು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಬಿಜೆಪಿಯವರಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ 2017ರಲ್ಲಿ ಹೇಳಿದ್ದರು. ಆದರೆ, ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

ತಮ್ಮ ಸುಳ್ಳು ಮುಚ್ಚಿಕೊಳ್ಳಲು ಬಿಜೆಪಿ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಿದೆ. ಲಂಬಾಣಿ ಜನರಿಗೆ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ಕಾನೂನು ಮಾಡಿದ್ದು ನಾವು. ಇಲ್ಲಿ ಹಕ್ಕು ಪತ್ರ ಕೊಡಲು ಬಂದು ಯೋಜನೆ ನಮ್ಮದೆಂದರೆ? ಅಡುಗೆ ಮಾಡಿದ್ದು ನಾವು ಬಡಿಸಿಬಿಟ್ಟು ನಮ್ಮದೆಂದಂತಿದೆ ಎಂದರು.

ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಏಳು ಕೆಜಿಯಿಂದ 5 ಕೆಜಿಗೆ ಇಳಿಸಿದ್ದು ಸುಳ್ಳಾ? ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್‌ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಅಕ್ಕಿಯನ್ನು ಏಕೆ ಕೊಡುತ್ತಿಲ್ಲ? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

RELATED TOPICS:
English summary :I am a Hindu, our father is also a Hindu, C.T. Do I quit being a Muslim just because Ravi says it?

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...