Wed,May06,2026
ಕನ್ನಡ / English

ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! | JANATA NEWS

13 Feb 2023

ವಿಜಯಪುರ : ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದು ಡೆತ್​ನೋಟ್ ಬರೆದಿಟ್ಟು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಆತ್ಮಹತ್ಯೆಗೆ ಶರಣಾದವರು. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್.ಭಜಂತ್ರಿ, ಸಿಂದಗಿ ಬಿಇಓ, ಸಿಆರ್​ಪಿ ಜಿ.ಎನ್.ಪಾಟೀಲ್ ಅವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ?

ಎಸ್​ ಎಲ್ ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯನ್ನು, ಶಿಕ್ಷಕ ಬಸವರಾಜಗೆ ವರ್ಗಾಯಿಸಿದ್ದರು. ಈ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ ದಾಖಲಿಸುವ 1ನೇ ನಂಬರ್ ರಿಜಿಸ್ಟರ್​ನ್ನು ಹಸ್ತಾಂತರ ಮಾಡಿದ್ದರು. ಆದರೆ ಭಜಂತ್ರಿ ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮ ದಿನಾಂಕಗಳನ್ನು 1ನೇ ನಂಬರ್ ರಿಜಿಸ್ಟರ್​ ಸರಿಯಾಗಿ ದಾಖಲಿಸದೇ,​ ಅಪೂರ್ಣ ರೀತಿಯಲ್ಲಿ ವರ್ಗಾಯಿಸಿದ್ದರು.

ಈ ಸಂಬಂಧ ಎಸ್​ ಎಲ್ ಭಜಂತ್ರಿಯನ್ನು, ಶಿಕ್ಷಕ ಬಸವರಾಜ್​ ಪ್ರಶ್ನಿಸಿದರೇ “ನಾನು ಸಿಆರ್​ಪಿ ಆಗುತ್ತೇನೆ, ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ ರಿಜಿಸ್ಟರ್​ನ್ನು ಸರಿಪಡಿಸದೇ ಸತಾಯಿಸುತ್ತಿದ್ದರು. ಈ ಬಗ್ಗೆ ಸಿಂದಗಿ ಬಿಇಓ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಪ್ರತಿಯಾಗಿ ಬಿಇಓ ಹೆಚ್ ಎಂ ಹರಿನಾಳ ಟಾರ್ಚರ್ ನೋಟಿಸ್ ಕೊಡುತ್ತಿದ್ದನು. ಸಾಸಾಬಳ ಶಾಲೆಯ ಸಹಶಿಕ್ಷಕ ಶಿಕ್ಷಕ ಬಿಎಂ ತಳವಾರ ನಿಂದಲೂ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನನ್ನ ಮೇಲೆ ಅಲಿಗೆಷನ್ ಮಾಡಿ, ಗ್ರಾಮದ ಸಂಗಮೇಶ್ ಚಿಂಚೋಳಿ ಎಂಬುವರು ಹಾಗೂ ಸಿಆರ್​ಪಿ ​​ನನ್ನಿಂದ ಹಣ ಪಡೆದಿದ್ದರು. ಹಾಗೇ ಬಿಸಿಯೂಟ ಯೋಜನೆಯಗೆ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದರು. ಶಿಕ್ಷಕ ಬಸವರಾಜ್ ವಿರುದ್ಧ ಸಂಗಮೇಶ್ ಚಿಂಚೋಳಿ ಬಿಇಓಗೆ ದೂರು ಕೊಟ್ಟಿದ್ದರು. ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ನನ್ನ ಹೆಂಡತಿ ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಡೆತ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಡೆತ್ ನೋಟಿನಲ್ಲಿ ಬಸವರಾಜ ಉಲ್ಲೇಖಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಜಿ.ಎನ್ ಪಾಟೀಲ, ಎಸ್.ಎಲ್.ಬಜಂತ್ರಿ, ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರುಗಳೇ ನನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಪತ್ನಿ ಮಹಾದೇವಿ ಬಸವರಾಜ ನಾಯಕಲ್ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Unable to bear the harassment of the authorities, the teacher committed suicide

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...