Tue,Aug04,2026
ಕನ್ನಡ / English

ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ | JANATA NEWS

14 Feb 2023

ಚಿಕ್ಕಬಳ್ಳಾಪುರ : ನಂದಿಬೆಟ್ಟದ ಟಿಪ್ಪು ಡ್ರಾಪ್ ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಡಿರುವ ಘಟನೆ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್​ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದು ಸ್ನೇಹಿತರು ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

ಕಳೆದ ಶನಿವಾರ ತನ್ನ ಸ್ನೇಹಿತನ ಕೆಎ 11 ಇಎಸ್ 9027 ನಂಬರಿನ ಡ್ಯೂಕ್ ಬೈಕ್ ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್​ನಲ್ಲಿ ತನ್ನ ಬೈಕ್ ನಿಲ್ಲಿಸಿ ಅಲ್ಲಿದ್ದ ಲಾಕ್​ರೂಂ ನಲ್ಲಿ ತನ್ನ ಹೆಲ್ಮೆಟ್ ಇಟ್ಟು ಸೀದಾ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಾಸ್ ಬಂದಿಲ್ಲ.

ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಾಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು ಪೊಲೀಸರಿಗೆ ತಿಳಿಸಿದ್ದು ಸಿ ಸಿ ಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರುವ ವಿಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವಿಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್ ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಇನ್ನೂ ಬ್ಯಾಗ್ ನಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ಡೆತ್ ನೋಟ್​ನಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲವಾದರೂ 'ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು' ಎಂಬ ಅಭಿಲಾಷೆ ಹೊರ ಹಾಕಿದ್ದಾನೆ ಎನ್ನಲಾಗಿದೆ.

RELATED TOPICS:
English summary :A young man commits suicide after falling from tipu drop in Nandibetta

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...