ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆಯಾಯ್ತು | JANATA NEWS
ಕೊಡಗು : ಫೆ.12 ರಂದು ಕೇವಲ 24 ಗಂಟೆಗಳಲ್ಲಿ ನರಭಕ್ಷಕ ಹುಲಿ ದಾಳಿಗೆ ಇಬ್ಬರ ಬಲಿಯಾಗಿದ್ದರು. ಕೊಡಗಿನಲ್ಲಿ ನರಭಕ್ಷಕ ಹುಲಿಯ ಭಯದಲ್ಲಿ ಜನರು ಓಡಾಡುತ್ತಿದ್ದರು.
ಜನರು ಕೂಡಲೇ ಹುಲಿಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಇದೀಗ ಆ ಹುಲಿ ಸೆರೆಯಾಗಿದ್ದು ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ.
ಇಂದು ಬೆಳಗ್ಗಿನಿಂದ ಹುಲಿ ಸೆರೆ ಕಾರ್ಯಾಚರಣೆ ತೀವ್ರಗೊಂಡಿತ್ತು. ನಂತರ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದ ಬಳಿ ಸುಮಾರು 10 ವರ್ಷ ಪ್ರಾಯದ ಹೆಣ್ಣು ಹುಲಿ ಸೆರೆಯಾಗಿದೆ.
ಬೆಳಗ್ಗೆಯಿಂದ ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ 3 ಸಾಕಾನೆ ಬಳಸಿ ಹುಲಿ ಸೆರೆ ಕಾರ್ಯಾಚರಣೆ ನಡೆಸಿದ್ದ ಸಿಬ್ಬಂದಿಗಳು, ಕೊನೆಗೂ ಅರಿವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನ ಸೆರೆ ಹಿಡಿಯಲಾಗಿದೆ. ಇದೀಗ ಹುಲಿಯನ್ನ ಸೆರೆ ಹಿಡಿದಿದ್ದು, ಸ್ಥಳೀಯ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.