Tue,Aug04,2026
ಕನ್ನಡ / English

ಅರ್ಕಾವತಿ ಹಗರಣದಲ್ಲಿದ್ದವರು ಕೆಲವೇ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ: ನಳಿನ್ ಕುಮಾರ್ ಕಟೀಲ್ | JANATA NEWS

25 Feb 2023

ರಾಮಚೂರು, : ಅರ್ಕಾವತಿ ಹಗರಣಕ್ಕೆ ಸಂಬಂಧಿಸಿ ಜಸ್ಟಿಸ್ ಕೆಂಪಣ್ಣನವರ ಆಯೋಗದ ವರದಿಯನ್ನು ನಮ್ಮ ಮುಖ್ಯಮಂತ್ರಿಯವರು ಸದನದಲ್ಲಿ ಮಂಡಿಸಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ.

ಲಿಂಗಸೂಗೂರಿನಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾದ ವೇಳೆ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಕರ್ನಾಟಕದಲ್ಲಿ ಅಭಿವೃದ್ಧಿಯ ಹರಿಹಾರ ಯಡಿಯೂರಪ್ಪನವರಿಗೆ ಬೇಡಿಕೆ ಹಾಗೂ ಜನಬೆಂಬಲ ಇದೆ. ಸಿದ್ದರಾಮಯ್ಯನಿಗೆ ಇಲ್ಲ. 5 ವರ್ಷ ಆಡಳಿತ ಮಾಡಿದ ಸಿದ್ದರಾಮಯ್ಯನ ಅವಧಿಯಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಅವಧಿಯಲ್ಲಿ ಅಧಿಕಾರಿಗಳ ಆತ್ಮಹತ್ಯೆ ನಿರಂತರವಾಗಿತ್ತು. ಸಿದ್ದರಾಮಯ್ಯನ ಕಾಲದಲ್ಲಿ ರೌಡಿರಾಜ್ಯ ಇತ್ತು ಎಂದು ಆರೋಪಿಸಿದರು.

24 ಜನ ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಹಿಂದೂ- ಮುಸ್ಲಿಮರ ನಡುವೆ ಕಲಹಕ್ಕಾಗಿ ಟಿಪ್ಪು ಜಯಂತಿ ಆರಂಭಿಸಿದರು. ಗಲಭೆಗಳನ್ನು ಸೃಷ್ಟಿಸಿದರು. ಹಿಂದುಳಿದ ವರ್ಗಗಳನ್ನು, ಕುರುಬರನ್ನು ತುಳಿದರು.

ತಾವು ಸಿಕ್ಕಿ ಬೀಳುತ್ತೇವೆ ಎಂದು ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನು ಹುಟ್ಟುಹಾಕಿದರು. ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನು ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಿರುದ್ಯೋಗಿಗಳಾಗಲಿದ್ದಾರೆ. ಎಲ್ಲೆಡೆ ಬಿಜೆಪಿ ಪರ ಅಲೆ ಇದೆ. ಮತ್ತೆ ಬಿಜೆಪಿ ಆಡಳಿತ ಬರಲಿದೆ ಎಂದು ಹುಲಿಯಾ ಕಾಡಿಗೆ ಹೋಗಲಿದೆ. ಬಂಡೆ ಒಡೆದು ಹೋಗಲಿದೆ. ಬಿಜೆಪಿಯ ಕಮಲ ಅರಳಲಿದೆ. ರಾಯಚೂರು ಕಲ್ಯಾಣ ಕರ್ನಾಟಕದ ಅನ್ನದ ಬಟ್ಟಲು. ಚಿನ್ನದ ನಾಡಿದು. ಆದರೆ, 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಚಿನ್ನದ ಬಟ್ಟಲನ್ನು ಕಬ್ಬಿಣದ, ಕಲ್ಲಿನ ಬಟ್ಟಲಾಗಿ ಮಾಡಿದೆ. ಇಲ್ಲಿ ಅಭಿವೃದ್ಧಿ ಮಾಡದೆ ಲೂಟಿ ಹೊಡೆಯುವ ಕಾರ್ಯ ಮಾಡಿದೆ ಎಂದು ಆರೋಪಿಸಿದರು.

ಬಾದಾಮಿಯಿಂದ ಸಿದ್ದರಾಮಯ್ಯನನ್ನು ಓಡಿಸಿದ್ದಾರೆ. ವರುಣಾಕ್ಕೆ ಬರಲು ಬಿಡುವುದಿಲ್ಲ. ಕೋಲಾರದಲ್ಲಿ ಜಾಗ ಇಲ್ಲ. ಮಾಜಿ ಮುಖ್ಯಮಂತ್ರಿಗೆ ಸೀಟೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್‍ನಲ್ಲಿ ಅವರು ಅಲೆಮಾರಿಯಾಗಿದ್ದಾರೆ ಎಂದು ಟೀಕಿಸಿದರು.

RELATED TOPICS:
English summary :Those involved in the Arkavati scam will go to jail in a few days: Nalin Kumar Kateel

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ಸಚಿವರ ಸೇರ್ಪಡೆಗೆ ಅನುಮೋದನೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ಸಚಿವರ ಸೇರ್ಪಡೆಗೆ ಅನುಮೋದನೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ನ್ಯೂಸ್ MORE NEWS...