Sat,Mar21,2026
ಕನ್ನಡ / English

ಅರ್ಕಾವತಿ ಹಗರಣದಲ್ಲಿದ್ದವರು ಕೆಲವೇ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ: ನಳಿನ್ ಕುಮಾರ್ ಕಟೀಲ್ | JANATA NEWS

25 Feb 2023

ರಾಮಚೂರು, : ಅರ್ಕಾವತಿ ಹಗರಣಕ್ಕೆ ಸಂಬಂಧಿಸಿ ಜಸ್ಟಿಸ್ ಕೆಂಪಣ್ಣನವರ ಆಯೋಗದ ವರದಿಯನ್ನು ನಮ್ಮ ಮುಖ್ಯಮಂತ್ರಿಯವರು ಸದನದಲ್ಲಿ ಮಂಡಿಸಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ.

ಲಿಂಗಸೂಗೂರಿನಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾದ ವೇಳೆ ಮಾತನಾಡಿ, ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಕರ್ನಾಟಕದಲ್ಲಿ ಅಭಿವೃದ್ಧಿಯ ಹರಿಹಾರ ಯಡಿಯೂರಪ್ಪನವರಿಗೆ ಬೇಡಿಕೆ ಹಾಗೂ ಜನಬೆಂಬಲ ಇದೆ. ಸಿದ್ದರಾಮಯ್ಯನಿಗೆ ಇಲ್ಲ. 5 ವರ್ಷ ಆಡಳಿತ ಮಾಡಿದ ಸಿದ್ದರಾಮಯ್ಯನ ಅವಧಿಯಲ್ಲಿ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಅವಧಿಯಲ್ಲಿ ಅಧಿಕಾರಿಗಳ ಆತ್ಮಹತ್ಯೆ ನಿರಂತರವಾಗಿತ್ತು. ಸಿದ್ದರಾಮಯ್ಯನ ಕಾಲದಲ್ಲಿ ರೌಡಿರಾಜ್ಯ ಇತ್ತು ಎಂದು ಆರೋಪಿಸಿದರು.

24 ಜನ ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಹಿಂದೂ- ಮುಸ್ಲಿಮರ ನಡುವೆ ಕಲಹಕ್ಕಾಗಿ ಟಿಪ್ಪು ಜಯಂತಿ ಆರಂಭಿಸಿದರು. ಗಲಭೆಗಳನ್ನು ಸೃಷ್ಟಿಸಿದರು. ಹಿಂದುಳಿದ ವರ್ಗಗಳನ್ನು, ಕುರುಬರನ್ನು ತುಳಿದರು.

ತಾವು ಸಿಕ್ಕಿ ಬೀಳುತ್ತೇವೆ ಎಂದು ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನು ಹುಟ್ಟುಹಾಕಿದರು. ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನು ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಿರುದ್ಯೋಗಿಗಳಾಗಲಿದ್ದಾರೆ. ಎಲ್ಲೆಡೆ ಬಿಜೆಪಿ ಪರ ಅಲೆ ಇದೆ. ಮತ್ತೆ ಬಿಜೆಪಿ ಆಡಳಿತ ಬರಲಿದೆ ಎಂದು ಹುಲಿಯಾ ಕಾಡಿಗೆ ಹೋಗಲಿದೆ. ಬಂಡೆ ಒಡೆದು ಹೋಗಲಿದೆ. ಬಿಜೆಪಿಯ ಕಮಲ ಅರಳಲಿದೆ. ರಾಯಚೂರು ಕಲ್ಯಾಣ ಕರ್ನಾಟಕದ ಅನ್ನದ ಬಟ್ಟಲು. ಚಿನ್ನದ ನಾಡಿದು. ಆದರೆ, 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷವು ಚಿನ್ನದ ಬಟ್ಟಲನ್ನು ಕಬ್ಬಿಣದ, ಕಲ್ಲಿನ ಬಟ್ಟಲಾಗಿ ಮಾಡಿದೆ. ಇಲ್ಲಿ ಅಭಿವೃದ್ಧಿ ಮಾಡದೆ ಲೂಟಿ ಹೊಡೆಯುವ ಕಾರ್ಯ ಮಾಡಿದೆ ಎಂದು ಆರೋಪಿಸಿದರು.

ಬಾದಾಮಿಯಿಂದ ಸಿದ್ದರಾಮಯ್ಯನನ್ನು ಓಡಿಸಿದ್ದಾರೆ. ವರುಣಾಕ್ಕೆ ಬರಲು ಬಿಡುವುದಿಲ್ಲ. ಕೋಲಾರದಲ್ಲಿ ಜಾಗ ಇಲ್ಲ. ಮಾಜಿ ಮುಖ್ಯಮಂತ್ರಿಗೆ ಸೀಟೇ ಇಲ್ಲ ಎಂಬ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್‍ನಲ್ಲಿ ಅವರು ಅಲೆಮಾರಿಯಾಗಿದ್ದಾರೆ ಎಂದು ಟೀಕಿಸಿದರು.

RELATED TOPICS:
English summary :Those involved in the Arkavati scam will go to jail in a few days: Nalin Kumar Kateel

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...