Tue,Aug04,2026
ಕನ್ನಡ / English

ಒಂದೇ ಕುಟುಂಬದ ನಾಲ್ವರ ಹತ್ಯೆ, ವಿಶೇಷ ಪೊಲೀಸ್ ತಂಡಗಳ ರಚನೆ, ತೀವ್ರಗೊಂಡ ತನಿಖೆ! | JANATA NEWS

25 Feb 2023

ಉತ್ತರಕನ್ನಡ : ಭಟ್ಕಳ ತಾಲೂಕಿನ ಹಾಡುವಳ್ಳಿಯ ಒಣಿಬಾಗಿಲು ಎನ್ನುವಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಭಟ್ಕಳ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಎಶಂಭು ಭಟ್ (65), ಅವರ ಪತ್ನಿ ಮಾದೇವಿ (60), ಮಗ ರಾಜೀವ್ (40) ಮತ್ತು ಸೊಸೆ ಕುಸುಮಾ (35) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.

ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಶಂಭು ಭಟ್ ಅವರ ಹಿರಿಯ ಸೊಸೆ ವಿದ್ಯಾ ಭಟ್ ಸಹೋದರ ವಿನಯ್ ಈ ಕೊಲೆ ಮಾಡಿದ್ದ ಎನ್ನಲಾಗಿದೆ.

ಶಂಭು ಭಟ್ಟರ ಹಿರಿಯ ಪುತ್ರ ಶ್ರೀಧರ ಶಂಭು ಭಟ್ಟ ಇವರು ಕಳೆದ ಕೆಲವು ಸಮಯದಿಂದ ಕಿಡ್ನಿ ವೈಫಲ್ಯಕ್ಕೊಳಗಾಗಿದ್ದು ಸುಮಾರು ಆರು ತಿಂಗಳ ಹಿಂದೆ ಡಯಾಲಿಸಿಸ್ ಮಾಡುತ್ತಿರುವಾಗಲೇ ಕೊನೆಯುಸಿರೆಳೆದಿದ್ದರು. ಅವರ ಮರಣದ ದಿನದಿಂದಲೇ ಆಸ್ತಿ ಜಗಳ ಶುರುವಾಗಿದೆ.

ಹಿರಿಯ ಮಗ ಹಾಗೂ ಸೊಸೆ ಮೂಲ ಮನೆಯಲ್ಲಿಲ್ಲದೇ ತಮ್ಮ ಪೌರೋಹಿತ್ಯ ವೃತ್ತಿಗಾಗಿ ನಗರದಲ್ಲಿ ಮನೆ ಮಾಡಿಕೊಂಡಿದ್ದರು. ಮಗ ತೀರಿ ಹೋದ ನಂತರ ಸೊಸೆ ಇಲ್ಲಿಯೇ ಇದ್ದು ಆಕೆಯ ಸಹೋದರ ವಿನಯ ಈತನು ಆಗಾಗ ಹಾಡುವಳ್ಳಿಗೆ ಹೋಗಿ ಪಾಲು ಕೊಡುವಂತೆ ಜಗಳ ಮಾಡಿದ್ದರಿಂದ ಶಂಭು ಭಟ್ಟರು ಇಬ್ಬರು ಗಂಡು ಮಕ್ಕಳು, ಮೂವರು ಹೆಣ್ಣು ಮಕ್ಕಳು ಹಾಗೂ ತಾವು ಪತಿ-ಪತ್ನಿ ಹೀಗೆ ಆಸ್ತಿಯನ್ನು ಪಾಲು ಮಾಡಿ ಕೊಟ್ಟಿದ್ದರು.

ಶುಕ್ರವಾರ ಬೆಳಿಗ್ಗೆ ಕೊಟ್ಟಿಗೆ ಕಟ್ಟುತ್ತಿರುವ ಕುರಿತು ತಕರಾರು ಮಾಡಿದ್ದರೆನ್ನಲಾಗಿದೆ. ಬೆಳಿಗ್ಗೆಯಷ್ಟೇ ಕೊಟ್ಟಿಗೆ ವಿಚಾರವಾಗಿ ಜಗಳ ಆಗಿದ್ದು ಮಧ್ಯಾಹ್ನ ಈ ಬರ್ಬರ ಕೃತ್ಯ ನಡೆದು ಹೋಗಿದೆ. ಈಗಾಗಲೇ ದೂರು ನೀಡಿದಂತೆ ಹಿರಿಯ ಸೊಸೆ ವಿದ್ಯಾ ಹಾಗೂ ಆಕೆಯ ತಂದೆ ಶ್ರೀಧರ ಇವರ ಕುಮ್ಮಕ್ಕಿನಿಂದ ವಿನಯ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಕೊಲೆಯ ಹಿಂದೆ ಹಿರಿಯ ಸೊಸೆಯ ಪಾತ್ರವಿದೆ ಎಂದು ಪೊಲೀಸರು ಶಂಕಿಸಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಭಟ್ಕಳ ಡಿವೈಎಸ್ಪಿ ಮತ್ತು ಸಿಪಿಐ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.

RELATED TOPICS:
English summary :Murder of four members of the same family, formation of special police teams, intensified investigation!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...