Tue,Aug04,2026
ಕನ್ನಡ / English

ರಾಹುಲ್ ಗಾಂಧಿ ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ಖಂಡನೀಯ: ಪ್ರಲ್ಹಾದ್ ಜೋಶಿ | JANATA NEWS

07 Mar 2023

ಬಳ್ಳಾರಿ : ಬ್ರಿಟನ್​ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, "ಬ್ರಿಟನ್, ಅಮೆರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ‌. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ" ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ. ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು" ಎಂದು ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ ನವರೇ ಎಂದು ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್‌ನವರೇ. ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

RELATED TOPICS:
English summary :Rahul Gandhi goes to Britain and makes childish statements about Indian democracy condemnable: Pralhad Joshi

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...